Connect with us

    DAKSHINA KANNADA

    ಕಾಸರಗೋಡು: ಬಾಲಕಿಯರಿಗೆ ಕಿರುಕುಳ ನೀಡಿದ ಮದ್ರಸ ಶಿಕ್ಷಕನ ಬಂಧನ

    ಕಾಸರಗೋಡು, ಜೂ 16: ಐವರು ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಲಾಗಿದೆ.

    ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಆರೋಪಿಯಾಗಿದ್ದಾನೆ. ಮದ್ರಸ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪಿಸಲಾಗಿತ್ತು.

    ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply