KARNATAKA
ಕಾಸರಗೋಡಿನಲ್ಲಿ ಖಾಸಾಗಿ ಬಸ್ ಪಲ್ಟಿ : ಚಾಲಕ ಮೃತ್ಯು..!
ಕಾಸರಗೋಡು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟು, 20 ಮಂದಿ ಗಾಯಗೊಂಡ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ.
ಚೇತನ್ ಕುಮಾರ್ (37) ಮೃತಪಟ್ಟ ಬಸ್ ಚಾಲಕನಾಗಿದ್ದಾರೆ. ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಚಾಲಿಂಗಾಲ್ ನ ಪೆರಿಯ ಗ್ರಾಮ ಪಂಚಾಯತ್ ಕಚೇರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಹಿನ್ನೆಲೆಯಲ್ಲಿ ಟೋಲ್ ಬೂತ್ ನಿರ್ಮಿಸಲು ಚಾಲಿಂಗಾಲ್ ನಲ್ಲಿ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಿದ್ದು, ಈ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಸ್ಸಿನಡಿಯಲ್ಲಿ ಸಿಲುಕಿದವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಸ್ಥಳೀಯರ ನೆರವಿನಲ್ಲಿ ಹೊರತೆಗೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
You must be logged in to post a comment Login