LATEST NEWS
ಕಾಸರಗೋಡು – ಅಂಜುಶ್ರೀ ಸಾವನಪ್ಪಿದ್ದು ಚಿಕನ್ ಬಿರಿಯಾನಿಯಿಂದಲ್ಲ ಇಲಿ ಪಾಷಾಣದಿಂದ…!!
ಕಾಸರಗೋಡು ಫೆಬ್ರವರಿ 15: ಕೇರಳದಲ್ಲಿ ಭಾರೀ ಸುದ್ದಿ ಮಾಡಿದ್ದ ವಿಧ್ಯಾರ್ಥಿನಿ ಅಂಜುಶ್ರೀ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಸಾಯನಿಕ ವರದಿ ಬಂದಿದ್ದು, ಅಂಜುಶ್ರೀ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ತಿಳಿದು ಬಂದಿದೆ.
ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿ ಕಾಸರಗೋಡು ನಗರ ಹೊರ ವಲಯದ ಹೋಟೆಲೊಂದರಿಂದ ಆನ್ಲೈನ್ನಲ್ಲಿ ಖರೀದಿಸಿದ್ದ ಆಹಾರ ಸೇವಿಸಿರುವುದು ಸಾವಿಗೆ ಕಾರಣ ಎಂದು ಕುಟುಂಬಸ್ಥರು ಮೇಲ್ಪರಂಬ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಹೋಟೆಲ್ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿದ್ದರು. ಆದರೆ ಆಹಾರದಿಂದ ಸಾವು ಸಂಭವಿಸಿಲ್ಲ ಎಂದು ತನಿಖೆಯಿಂದ ದೃಢಪಟ್ಟಿತ್ತು.
ಘಟನೆ ಬೆಳಕಿಗೆ ಬರ್ತಿದ್ದಂತೆ, ಸಂಬಂಧಪಟ್ಟ ಹೋಟೆಲ್ನಲ್ಲಿರುವ ನೀರು ಮತ್ತು ಆಹಾರ )ವನ್ನು ಪರಿಶೀಲಿಸಿದ್ದರು. ಈ ಘಟನೆ ಆರೋಗ್ಯ ಸಚಿವರ ಗಮನಕ್ಕೆ ಬರುತ್ತಿದ್ದಂತೆ ತನಿಖೆಗೆ ಆದೇಶಿಸಲಾಗಿತ್ತು. ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದರು.
ಇದೀಗ ಅಂಜುಶ್ರೀ ಪಾರ್ವತಿಯ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿಯಿಂದ ತಿಳಿದು ಬಂದಿದೆ.
You must be logged in to post a comment Login