KARNATAKA
ಕಾಸರಗೋಡು : ‘ನನ್ನ ಸಾವಿಗೆ ನಾನೇ ಕಾರಣ’ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ..!
ಕಾಸರಗೋಡು : ‘ನನ್ನ ಸಾವಿಗೆ ನಾನೇ ಕಾರಣ ವೆಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಪೆರ್ಲದ ಪದ್ಯಾಣದಲ್ಲಿ ನಡೆದಿದೆ.
ಪದ್ಯಾಣದ ಸಿಲ್ವೆಸ್ಟರ್ ಕ್ರಾಸ್ತಾ ಎಂಬವರ ಪುತ್ರ ಐವನ್ ಕ್ರಾಸ್ತಾ(23) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಉಳ್ಳಾಲ ತೊಕ್ಕೊಟ್ಟುವಿನ ಕಾಲೇಜೊಂದರ ಬಿಎಡ್ ವಿದ್ಯಾರ್ಥಿಯಾಗಿದ್ದ ಐವನ್ ಮಂಗಳವಾರ ಮನೆಯಿಂದ ನಾಪತ್ತೆಯಾಗಿದ್ದ. ಐವನ್ ರನ್ನು ಹುಡುಕಾಡಿದಾಗ ರಾತ್ರಿ ವೇಳೆ ಮನೆ ಸಮೀಪದ ಬಾವಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ನಡುವೆ ಅವರ ಮಲಗುವ ಕೋಣೆಯೊಳಗೆ ಡೆತ್ ನೋಟ್ ಪತ್ತೆಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದಿಟ್ಟಿದ್ದರೆನ್ನಲಾಗಿದೆ. ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login