Connect with us

    LATEST NEWS

    ಕಾಸರಗೋಡು : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಪ್ಪಳದ ಯುವಕ ಸಾವು..!

    ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

    ಕಾಸರಗೋಡು : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

    ಕಾಸರಗೋಡಿನ ಉಪ್ಪಳ ಸೋಂಗಲ್ ಬದರಿಯಾ ಜುಮಾ ಮಸೀದಿ ವ್ಯಾಪ್ತಿಯ ಮಹ್ಮದ್ ಎಂಬವರ ಪುತ್ರ ಇಬ್ರಾಹಿಂ ಖಲೀಲ್ (21) ಮೃತ ಯುವಕನಾಗಿದ್ದಾನೆ .

    ಇಬ್ರಾಹಿಂ ಖಲೀಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದರು.

    ಭಾನುವಾರ ರಾತ್ರಿ 8 ಗಂಟೆಗೆ ನಾರಾಯಣ ಮಂಗಲದಲ್ಲಿ ಸೀತಾಂಗೋಳಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಖಲೀಲ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.

    ಖಲೀಲ್ ಸಹಿತ ಗಾಯಗೊಂಡಿರುವ ಮಣಿಮುಂಡ ಮೂಲದ ಮೊಹಮ್ಮದ್ ಮಹಸಿಲ್ (24) ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದಾರೆ.

    ಮಹ್ಸಿಲ್ ಮಂಗಲ್ಪಾಡಿ ಪಂಚಾಯತ್ ಸದಸ್ಯ ಮಹ್ಮೂದ್ ಅವರ ಪುತ್ರರಾಗಿದ್ದು ಕುಂಬಳೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply