Connect with us

    LATEST NEWS

    ಕೆಲವು ಷರತ್ತಗಳೊಂದಿಗೆ ನಾಳೆಯಿಂದ ಕಾಸರಗೋಡು ಬಸ್ ಸಂಚಾರಕ್ಕೆ ಅವಕಾಶ – ದ.ಕ ಜಿಲ್ಲಾಧಿಕಾರಿ

    ಮಂಗಳೂರು ಜುಲೈ 18: ಕೊರೊನಾ ಅನ್ಲಾಕ್ ಪ್ರಕ್ರಿಯೆಯ ಹಂತವಾಗಿ ಕೆಲವು ಷರತ್ತುಗಳೊಂದಿಗೆ ನಾಳೆಯಿಂದ ಕಾಸರಗೋಡು – ಮಂಗಳೂರು ಬಸ್ ಸಂಚಾರಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.


    ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚಾರ ಮಾಡುತ್ತಿದ್ದು, ಕಾಸರಗೋಡು – ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ದಿನಾಂಕ: 19-07-2021 ರಿಂದ ಈ ಕೆಳಕಂಡ ಪರತ್ತಿಗೊಳಪಟ್ಟು ಅನುಮತಿಸಲಾಗಿದೆ.


    1) ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1(ಒಂದು) ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್ ನ
    ನಿರ್ವಾಹಕರು (Bus Conductor) ಖಚಿತಪಡಿಸಕೊಳ್ಳತಕ್ಕದ್ದು, 2) .ಕೋವಿಡ್‌ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ)
    ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply