Connect with us

    LATEST NEWS

    ಕಾಸರಗೋಡು – ಇಲಿ ಪಾಷಾಣ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಬೇಡಕಂ ಪೊಲೀಸ್ ಠಾಣೆ ಎಸ್ಐ ಚಿಕಿತ್ಸೆ ಫಲಕಾರಿಯಾಗದೇ ಸಾವು

    ಕಾಸರಗೋಡು ಮೇ 06 : ಇಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಅಧಿಕಾರಿ ಕೊಚ್ಚಿಯ ಅಮೃತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಶನಿವಾರ ಕೊನೆಯುಸಿರೆಳೆದಿದ್ದಾರೆ. ಬೇಡಕಂ ಪೊಲೀಸ್ ಠಾಣೆಯಲ್ಲಿ ಗ್ರೇಡ್ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಕೋಳಿಚಾಲ್ ಮೂಲದ ಸಿಕೆ ವಿಜಯನ್ (49) ಮೃತರು.


    ಪೊಲೀಸ್ ಠಾಣೆ ಸನಿಹದ ಕ್ವಾರ್ಟರ್ಸ್‌ನಲ್ಲಿ ವಿಜಯನ್ ಅವರನ್ನು ಕಳೆದ ಸೋಮವಾರ ಇಲಿ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಪತ್ತೆಹಚ್ಚಲಾಗಿದ್ದು, ತಕ್ಷಣ ಅವರನ್ನು ಕಾಸರಗೋಡಿನ ಆಸ್ಪತ್ರೆಗೆ ಸಾಗಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡುಬಾರದ ಹಿನ್ನೆಲೆಯಲ್ಲಿ ಕೊಚ್ಚಿಯ ಅಮೃತಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಚುನಾವಣೆ ಸಂದರ್ಭ ವ್ಯಕ್ತಿಯೊಬ್ಬ ಪಂಚಾಯಿತಿ ಅಧ್ಯಕ್ಷರನ್ನು ಅವಮಾನಿಸಿದ ಪ್ರಕರಣದ ತನಿಖೆ ಜವಾಬ್ದಾರಿ ವಿಜಯನ್ ಅವರು ವಹಿಸಿಕೊಂಡಿದ್ದರು. ನಂತರದ ದಿನದಲ್ಲಿ ವಿಜಯನ್ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರೆನ್ನಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply