Connect with us

    DAKSHINA KANNADA

    ಮಂಗಳೂರು:ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ್ ಬಲಿಪ ನಿಧನ

    ಮಂಗಳೂರು. ಎಪ್ರಿಲ್ 11: ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ್ ಬಲಿಪ ಅವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಏಪ್ರಿಲ್ 11ರ ಸೋಮವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಅನಾರೋಗ್ಯದ ಕಾರಣದಿಂದಾಗಿ ಈ ಬಾರಿಯ ಮೇಳದ ತಿರುಗಾಟದಿಂದ ಬಲಿಪ ಅವರು ದೂರ ಉಳಿದಿದ್ದರು. ಬಲಿಪ ಪ್ರಸಾದ್ ಅವರು ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಬಲಿಪ ನಾರಾಯಣ ಭಾಗವತರ ಪುತ್ರ. ಬಲಿಪ ನಾರಾಯಣ ಭಾಗವತರು ಸಾಕಶ್ಟು ಪ್ರಸಿದ್ಧಿ ಪಡೆದಿದ್ದರು.

    ತಂದೆಯಂತೆಯೇ ಪುತ್ರ ಕೂಡ ಯಕ್ಷಗಾನ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಅಲ್ಲದೆ, ತನ್ನದೇ ಶೈಲಿಯಿಂದಾಗಿ ಯಕ್ಷ ಪ್ರೇಮಿಗಳಾ ಮನ ಗೆದ್ದಿದ್ದರು. ಕಲೆಯನ್ನು ಮೈಗೂಡಿಸಿಕೊಂಡು ಕಟೀಲು ಎರಡನೆಯ ಮೇಳದ ಪ್ರಧಾನ ಭಾಗವತರಾಗಿದ್ದರು. ತಂದೆಯ ಬಳಿಕ ಬಲಿಪ ಶೈಲಿಯ ಭಾಗವತಿಕೆ ಮೂಲಕ ಪ್ರಸಾದ್ ಮಿಂಚಿದ್ದರು. ಇವರು ತಂದೆ, ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply