Connect with us

    LATEST NEWS

    ಕೇರಳ- ಪ್ರವಾಸಿಗರಿದ್ದ ಬೋಟ್ ಮುಳುಗಿ ಮಕ್ಕಳು ಸೇರಿದಂತೆ 22 ಮಂದಿ ಸಾವು…!!

    ತಿರುವನಂತಪುರಂ: ಕೇರಳದಲ್ಲಿ ಮಲಪ್ಪುರಂನಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಪ್ರವಾಸಿಗರಿದ್ದ ಬೋಟ್ ಒಂದು ಮುಳುಗಿದ ಪರಿಣಾಮ 22 ಮಂದಿ ಸಾವನಪ್ಪಿದ್ದಾರೆ.


    ಕೇರಳದ ಮಲಪ್ಪುರಂನ ತನೂರ್‌ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ಘಟನೆಯ ವೇಳೆ ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.


    ಸದ್ಯ ಸಾವಿನ ಸಂಖ್ಯೆ ಈಗ 22ಕ್ಕೆ ಏರಿದೆ. 7 ಜನರ ಸ್ಥೀತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ . ಘಟನೆಯಲ್ಲಿ ಮೃತಪಟ್ಟ ಕುಟುಂಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಪರಿಹಾರ ನಿಧಿಯಿಂದ 2 ಲಕ್ಷ ರೂ ಘೋಷಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಾವಿಗೆ ಸಂತಾಪ ಸೂಚಿಸಿ ಹೇಳಿಕೆ ನೀಡಿದ್ದು, ಸಂಘಟಿತ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply