Connect with us

    LATEST NEWS

    ಕೇರಳ ಝಿಕಾ ವೈರಸ್ ಪ್ರಕರಣ ಏರಿಕೆ – ದಕ್ಷಿಣಕನ್ನಡ ಜಿಲ್ಲೆ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ

    ಮಂಗಳೂರು ಜುಲೈ 13: ಕೊರೊನಾದ ರೂಪಾಂತರಿ ಡೆಲ್ಪಾ ಪ್ಲಸ್ ವೈರಸ್ ಹಾಗೂ ಝಿಕಾ ವೈರಲ್ ಪ್ರಕರಣ ಕೇರಳದಲ್ಲಿ ಹೆಚ್ಚಾಗಿದ ಕಂಡು ಬಂದ ಹಿನ್ನಲೆ ಕೇರಳದ ಗಡಿ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ಜನರ ತಪಾಸಣೆಯನ್ನು ಜಿಲ್ಲಾಡಳಿತ ಬಿಗಿಗೊಳಿಸಿದೆ.


    ಈ ಕುರಿತಂತೆ ಮಾಹಿತಿ ನೀಡಿರುವ ಡಿಸಿಪಿ ಹರಿರಾಂ ಶಂಕರ ಅವರು ಗೃಹ ಸಚಿವರ ಸೂಚನೆಯಂತೆ ಕರ್ನಾಟಕ- ಕೇರಳದ ಗಡಿ ಭಾಗಗಳಲ್ಲಿ ಪ್ರಯಾಣಿಸುವವರ ತಪಾಸಣೆ ಬಿಗಿಗೊಳಿಸಲಾಗಿದ್ದು, ಗಡಿ ಭಾಗದಲ್ಲಿ ಸಂಚರಿಸುವ ಪ್ರತಿಯೊಬ್ಬರ ತಪಾಸಣೆ ನಡೆಸಲಾಗುತ್ತಿದೆ ಎಂದರು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ತಲಪಾಡಿ, ನೆತ್ತಿಲಪದವು, ನಾರ್ಯ ಕ್ರಾಸ್, ನಂದಾರ ಪಡ್ಪು, ಮುದುಂಗಾರು ಕಟ್ಟೆ, ತೌಡುಗೋಳಿಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದ್ದು, ಸಿಬ್ಬಂದಿಯನ್ನೂ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

    ಇನ್ನು ರೈಲ್ವೆ ಪೊಲೀಸರ ಸಹಕಾರದೊಂದಿಗೆ ಮಂಗಳೂರು ಸೆಂಟ್ರಲ್‌ ಹಾಗೂ ಮಂಗಳೂರು ಜಂಕ್ಷನ್‌ ರೈಲ್ವೆ ನಿಲ್ದಾಣಗಳಲ್ಲಿಯೂ ಪೊಲೀಸ್ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.

    ನಿತ್ಯ ಕೆಲಸಗಳಿಗೆ ಬರುವವರು, ವಿದ್ಯಾರ್ಥಿಗಳಿಗೆ ಈಗಾಗಲೇ ಕೋವಿಡ್–19 ನಿರೋಧಕ ಲಸಿಕೆ ಅಥವಾ ಆರ್‌ಟಿಪಿಸಿಆರ್‌ ನೆಗೆಟಿವ್ ಪ್ರಮಾಣ ಪತ್ರದ ಆಧಾರದಲ್ಲಿ 14 ದಿನಗಳ ಅವಧಿಗೆ ಪಾಸ್ ನೀಡಲಾಗುತ್ತಿದೆ. ಉಳಿದ ಜನರು 72 ಗಂಟೆಯೊಳಗಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಲಸಿಕೆ ಪಡೆದಿರುವ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ. ಅನಗತ್ಯವಾಗಿ ಗಡಿಗಳಲ್ಲಿ ಸಂಚರಿಸುವ ಮೂಲಕ ಕೋವಿಡ್ ಹರಡುವುದನ್ನು ತಡೆಯುವುದು ಮಾತ್ರ ಈ ತಪಾಸಣೆಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ಕೇರಳ- ಕರ್ನಾಟಕ ನಡುವೆ ಬಸ್ ಸಂಚಾರ ಸದ್ಯಕ್ಕೆ ಆರಂಭವಾಗಿಲ್ಲ. ಆರಂಭವಾದಲೂ ಇದೇ ರೀತಿಯ ಕ್ರಮವನ್ನು ಜಿಲ್ಲಾಡಳಿತದ ಸೂಚನೆಯ ಮೇರೆಗೆ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.

    ದಕ್ಷಿಣಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಗಡಿ ಭಾಗದ ಹತ್ತು ಕಡೆಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್‌ ಸೋನಾವಣೆ ತಿಳಿಸಿದ್ದಾರೆ. ವಿಟ್ಲ ಠಾಣೆ ವ್ಯಾಪ್ತಿಯ ಸಾರಡ್ಕ, ಸಾಲೆತ್ತೂರು, ಕನ್ಯಾನ, ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಮೇನಾಲ, ಸ್ವರ್ಗ, ಸುಳ್ಯ ಪದವು, ಸುಳ್ಯ ಠಾಣೆ ವ್ಯಾಪ್ತಿಯು ಮೂರೂರು, ಮಂಡೆಕೋಲು, ಬಡ್ಡಡ್ಕ, ಕನ್ನಡಿತೋಡಿನಲ್ಲಿ ಚೆಕ್‌ಪೋಸ್ಟ್‌ಗಳು ಕಾರ್ಯಾರಂಭ ಮಾಡಿವೆ.

    Share Information
    Advertisement
    Click to comment

    You must be logged in to post a comment Login

    Leave a Reply