LATEST NEWS
ಅಯ್ಯಪ್ಪ ಮಾಲಾಧಾರಿಯಾಗಿ ಶಬರಿಮಲೆ ಏರಿದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ಕೇರಳ ಎಪ್ರಿಲ್ 12: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ನಿನ್ನೆ ಅಯ್ಯಪ್ಪ ಮಾಲೆಧಾರಿಯಾಗಿ ಇರುಮುಡಿ ಸಮೇತ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದರು.
ತಿಂಗಳ ಪೂಜೆಗೆ ಶಬರಿಮಲೆ ದೇವಸ್ಥಾನವನ್ನು ತೆರೆಯಲಾಗಿದ್ದು, ಕೇರಳ ರಾಜ್ಯಪಾಲರಾಗಿರುವ ಆರಿಫ್ ಮೊಹಮ್ಮದ್ ಖಾನ್ ಸಾಂಪ್ರದಾಯಿಕವಾದಿ ಮಣಿಮಾಲೆ ಧರಿಸಿ ಇರುಮುಡಿ ಕಟ್ಟಿ, ಪಂಪೆಯಿಂದ ಶಬರಿಮಲೆ ಬೆಟ್ಟವನ್ನು ಹತ್ತುವ ಮೂಲಕ ದೇವರ ದರ್ಶನ ಪಡೆದರು. ಸುಮಾರು 5 ಕಿಲೋಮೀಟರ್ ದೂರವನ್ನು ಸಾಮಾನ್ಯ ಭಕ್ತರಂತೆ ತಲೆ ಮೇಲೆ ಇರುಮುಡಿ ಹೊತ್ತುಕೊಂಡು ಹತ್ತಿದ್ದಾರೆ.
2018 ರಲ್ಲಿ ಸುಪ್ರೀಂ ಕೋರ್ಟ್ 10-50 ವರ್ಷ ವಯಸ್ಸಿನ ಮಹಿಳೆಯರ ಪ್ರವೇಶದ ಮೇಲಿನ ನಿಷೇಧವನ್ನು ತೆಗೆದುಹಾಕಿದ ನಂತರ ಶಬರಿಮಾಲಾ ದೇಗುಲ ವಿವಾದದಲ್ಲಿತ್ತು. ನಂತರ ಕೇರಳ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೆ ತರುವುದಾಗಿ ಘೋಷಿಸಿತ್ತು,
ಆದರೂ ಇದು ವಿವಿಧ ಪಕ್ಷಗಳು ಹಾಗೂ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿ ಬೀದಿ ಪ್ರತಿಭಟನೆಗೆ ಕಾರಣವಾಯಿತು ಮತ್ತು ಅಯ್ಯಪ್ಪ ಭಕ್ತರು ಶಬರಿಮಲೆ ಪ್ರವೇಶಿಸಲು ಯತ್ನಿಸಿದ ಎಲ್ಲಾ ಮಹಿಳೆಯರನ್ನು ನಿರ್ಬಂಧಿಸಿದರು. ಸದ್ಯ ಈ ವಿವಾದ ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠದ ಮುಂದಿದ್ದು, ತೀರ್ಪು ಇನ್ನಷ್ಟೇ ಬರಬೇಕಾಗಿದೆ
You must be logged in to post a comment Login