Connect with us

LATEST NEWS

ಕಾಂತಾರಕ್ಕೆ ಮತ್ತೆ ಸಂಕಷ್ಟ – ಕೇರಳ ಹೈಕೋರ್ಟ್ ನಿಂದ ತಡೆಯಾಜ್ಞೆ

ಕೇರಳ ಡಿಸೆಂಬರ್ 2: ತುಳುವಿನಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾದ ಮತ್ತೆ ಕಾಂತಾರ ಸಿನೆಮಾ ತಂಡಕ್ಕೆ ಸಂಕಷ್ಟ ಎದುರಾಗಿದ್ದು, ಕಾಂತಾರ’ ಚಿತ್ರದ ನಿರ್ಮಾಪಕ ಹೊಂಬಾಳೆ ಫಿಲಂಸ್ ವಿರುದ್ಧ ‘ವರಾಹ ರೂಪಂ’ ಹಾಡನ್ನು ಬಳಸಿದ್ದಕ್ಕಾಗಿ ಮ್ಯೂಸಿಕ್ ಬ್ಯಾಂಡ್, ತೈಕ್ಕುಡಂ ಬ್ರಿಡ್ಜ್ ಸಲ್ಲಿಸಿದ್ದ ಮೊಕದ್ದಮೆಯನ್ನು ಹಿಂದಿರುಗಿಸಿದ್ದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಕೇರಳ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.


ಆಪಾದಿತ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೇಲೆ.ನ್ಯಾಯಮೂರ್ತಿ ಪಿ ಸೋಮರಾಜನ್ ಹೊಂಬಾಳೆ ಫಿಲಂಸ್, ರಿಷಬ್ ಶೆಟ್ಟಿ, ಪೃಥ್ವಿರಾಜ್ ಫಿಲ್ಮ್ಸ್, ಅಮೆಜಾನ್ ಸೆಲ್ಲರ್ ಸರ್ವೀಸ್ ಪ್ರೈವೇಟ್ ಲಿಮಿಟೆಡ್, ಗೂಗಲ್ ಇಂಡಿಯಾ ಹೆಡ್ ಆಫೀಸ್, ಸ್ಪಾಟಿಫೈ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಇತರರಿಗೆ ನೋಟಿಸ್ ಜಾರಿ ಮಾಡಿದ್ದಾರೆ.


ಸೆಪ್ಟೆಂಬರ್ 30, 2022 ರಂದು ಬಿಡುಗಡೆಯಾದ ರಿಷಬ್ ಶೆಟ್ಟಿ ಅವರ ಬ್ಲಾಕ್‌ಬಸ್ಟರ್ ಕನ್ನಡ ಚಲನಚಿತ್ರ ಕಾಂತಾರ ಮತ್ತು ಅದರ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಶೀಘ್ರದಲ್ಲೇ ‘ವರಾಹ ರೂಪಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪಗಳನ್ನು ಎದುರಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *