Connect with us

    KARNATAKA

    ಕೊರೊನಾ ಸೋಂಕಿತರಲ್ಲದ ಇತರೆ ರೋಗಿಗಳಿಗೆ ಮಾತ್ರ ತಲಪಾಡಿ ಗಡಿ ಓಪನ್

    ಕೊರೊನಾ ಸೋಂಕಿತರಲ್ಲದ ಇತರೆ ರೋಗಿಗಳಿಗೆ ಮಾತ್ರ ತಲಪಾಡಿ ಗಡಿ ಓಪನ್

    ಮಂಗಳೂರು ಎಪ್ರಿಲ್ 7: ಕೇರಳ ಕರ್ನಾಟಕ ಗಡಿ ಬಂದ್ ವಿವಾದ ಅಂತ್ಯಗೊಂಡಿದೆ. ತುರ್ತು ವೈದ್ಯಕೀಯ ಅಗತ್ಯ ಇದ್ದರೆ ಮಾತ್ರ ಕೇರಳಕ್ಕೆ ಕರ್ನಾಟಕ ಗಡಿ ತೆರೆಯಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಕರ್ನಾಟಕ ಮತ್ತು ಕೇರಳ ನಡುವಿನ ಗಡಿ ಬಂದ್ ವಿವಾದ ಇತ್ಯರ್ಥವಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.

    ಕೇರಳದ ಕಾಸರಗೋಡಿನ ಕೊರೊನಾ ಸೋಂಕಿತರಲ್ಲದ ಇತರೆ ರೋಗಿಗಳಿಗೆ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಕರ್ನಾಟಕ ಸರ್ಕಾರ ಒಪ್ಪಿಗೆ ಸೂಚಿಸಿದೆ ಇದರೊಂದಿಗೆ ಉಭಯ ರಾಜ್ಯಗಳ ನಡುವಿನ ಗಡಿ ಬಂದ್ ವಿವಾದ ಅಂತ್ಯವಾಗಿದೆ ಸೊಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಇಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.

    ಕೊವಿಡ್ 19 ಸೊಂಕು ಇಲ್ಲದ ಇತರ ರೋಗಿಗಳ ವೈದ್ಯಕೀಯ ಪ್ರಮಾಣ ಪತ್ರವನ್ನು ಹಾಜರುಪಡಿಸಿ ಆಂಬುಲೆನ್ಸ್‌ ನಲ್ಲಿ ತಲಪಾಡಿ ಗಡಿ ಮೂಲಕ ಕರ್ನಾಟಕದ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಕೇರಳ ಸರಕಾರ ಹಾಗೂ ಕರ್ನಾಟಕ ರಾಜ್ಯ ಸರಕಾರದ ಮದ್ಯೆ ಒಪ್ಪಂದ ನಡೆದಿತ್ತು.

    ಈ ಒಪ್ಪಂದ ಪ್ರಕಾರ ಕೇರಳ ಸರಕಾರ ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರವನ್ನು ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತುರ್ತು ಚಿಕಿತ್ಸೆ ಮತ್ತು ಅಗತ್ಯ ವಸ್ತುಗಳಿಗೆ ಗಡಿ ತೆರೆಯಲು ಅವಕಾಶ ನೀಡುವಂತೆ ಕರ್ನಾಟಕ ಸರಕಾರಕ್ಕೆ ಸೂಚಿಸಿದೆ.
    ಕಾಸರಗೋಡಿನಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಕರ್ನಾಟಕ ರಾಜ್ಯ ಸರಕಾರ ಕೇರಳ ಕರ್ನಾಟಕ ಸಂಪರ್ಕಿಲಸುವ ಎಲ್ಲಾ ಗಡಿಗಳನ್ನು ಬಂದ್ ಮಾಡಿತ್ತು. ಈ ಹಿನ್ನಲೆ ಕೇರಳ ಸರಕಾರ ಗಡಿ ಬಂದ್ ತೆರವುಗೊಳಿಸುವಂತೆ ಒತ್ತಾಯಿಸಿ ಪತ್ರ ವ್ಯವಹಾರಗಳು, ರಾಜೀ ಸಂಧಾನಗಳು, ನ್ಯಾಯಾಂಗ ಹೋರಾಟಗಳೂ ನಡೆದಿದ್ದವು.

    Share Information
    Advertisement
    Click to comment

    You must be logged in to post a comment Login

    Leave a Reply