Connect with us

    LATEST NEWS

    ಕೇರಳದಲ್ಲಿ ಮುಂಗಾರು ಮಳೆ ಅಬ್ಬರ – ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಸೂಚನೆ

    ತಿರುವನಂತಪುರ ಜೂನ್ 02 : ಕೇರಳಕ್ಕೆ ಮುಂಗಾರು ಪೂರ್ವ ಮಳೆ ಜೊತೆ ಇದೀಗ ಮುಂಗಾರು ಮಳೆಯೂ ಕೂಡ ತನ್ನ ಅಬ್ಬರ ಮುಂದುವರೆಸಿದ್ದು, ಹಲವು ಪ್ರದೇಶಗಳಿಗೆ ಹವಮಾನಾ ಇಲಾಖೆ ಅಲರ್ಟ್ ಘೋಷಿಸಿದೆ.


    ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ ಮುಂದುವರಿದಿದೆ. ಎರ್ನಾಕುಲಂ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಪಟ್ಟಣಂತಿಟ್ಟ, ಆಲಪ್ಪುಳ, ಇಡುಕ್ಕಿ, ವಯನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ.
    ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೂಕುಸಿತ ಸಂಭವಿಸುವ ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದೆ. ಜತೆಗೆ ಭಾರಿ ಪ್ರಮಾಣದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇರುವ ಕಾರಣ ಗುಡ್ಡಗಾಡು ಪ್ರದೇಶದಲ್ಲಿ ರಾತ್ರಿ ವೇಳೆ ಸಂಚಾರ ಕೈಗೊಳ್ಳದಂತೆ ನಾಗರಿಕರಿಗೆ ಎಚ್ಚರಿಕೆ ನೀಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply