Connect with us

    FILM

    ಕೆಜಿಎಫ್ 2 ಬಿಡುಗಡೆಗೆ ಕ್ಷಣಗಣನೆ ಬೆನ್ನಲ್ಲೇ – ರಾಕಿಂಗ್ ಸ್ಟಾರ್ ಯಶ್ ಟೆಂಪಲ್ ರನ್…!

    ಮಂಗಳೂರು: ಎಪ್ರಿಲ್ 14 ರಂದು ಪ್ರಪಂಚದಾದ್ಯಂತ ಕೆಜಿಎಫ್ ಸಿನೆಮಾ ಬಿಡುಗಡೆಗೊಳ್ಳಲಿದ್ದು, ಈ ನಡುವೆ ರಾಕಿಂಗ್ ಸ್ಟಾರ್ ಯಶ್ ದೇವಸ್ಥಾನಗಳ ಭೇಟಿ ಆರಂಭಿಸಿದ್ದಾರೆ. ಇಂದು ನಟ ಕುಕ್ಕೆ ಸುಬ್ರಹ್ಮಣ ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.

    ಕೆ.ಜಿ.ಎಫ್ ನಿರ್ಮಾಪಕ ವಿಜಯ್ ಕಿರಂಗದೂರು ಜೊತೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ದೇವರ ದರ್ಶನ ಪಡೆದರು.


    ಧರ್ಮಸ್ಥಳಕ್ಕೆ ಹೆಲಿಕಾಪ್ಟರ್‍ನಲ್ಲಿ ಆಗಮಿಸಿ ಅಲ್ಲಿಂದ ರಸ್ತೆ ಮಾರ್ಗವಾಗಿ ಕುಕ್ಕೆಗೆ ತೆರಳಿದ್ದಾರೆ. ಕುಕ್ಕೆಯಲ್ಲಿ ದೇವರ ದರ್ಶನ ಪಡೆದು ನಂತರ ಧರ್ಮಸ್ಥಳಕ್ಕೆ ಬಂದು ಮೊದಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಪೂಜ್ಯ ಖಾವಂದರು ಯಶ್ ಬಳಿ ಸಿನಿಮಾದ ಬಗ್ಗೆ ಮಾಹಿತಿ ಪಡೆದುಕೊಂಡರು.

    Share Information
    Advertisement
    Click to comment

    You must be logged in to post a comment Login

    Leave a Reply