LATEST NEWS
ಕೆಜಿಎಫ್ ರಾಕಿ ಭಾಯ್ ಆಗಲು ನಾಲ್ವರು ಅಮಾಯಕರ ಕೊಲೆ ಮಾಡಿದ ಯುವಕ
ಮಧ್ಯಪ್ರದೇಶ: ಕೆಜಿಎಫ್ ಚಿತ್ರದ ರೀತಿಯಲ್ಲೇ ಡಾನ್ ಆಗಲು 19 ವರ್ಷದ ಯುವಕನೊಬ್ಬ ನಾಲ್ವರು ಅಮಾಯಕ ಸೆಕ್ಯೂರಿಟಿ ಗಾರ್ಡ್ ಗಳನ್ನು ಕೊಲೆ ಮಾಡಿದ್ದಾನೆ.
ಮಧ್ಯಪ್ರದೇಶದಲ್ಲಿ ನಡೆದಿರುವ ಈ ಘಟನೆಯಲ್ಲಿ ಕೊನೆಗೂ ಪೊಲೀಸರು ಆರೋಪಿ ಶಿವಪ್ರಸಾದ್ನನ್ನು ಬಂಧಿಸಿದ್ದಾರೆ. ಈತನ ಬಂಧನ ತಡವಾಗಿದ್ದರೆ ಇನ್ನೂ ಹಲವರ ಹತ್ಯೆಯಾಗುತ್ತಿತ್ತು. ಆತನ ಮುಂದಿನ ಟಾರ್ಗೆಟ್ ಪೊಲೀಸರ ಹತ್ಯೆಯಾಗಿತ್ತಂತೆ!
ಕೆಜಿಎಫ್ ಚಿತ್ರದ ಹೀರೊ ಮಾದರಿಯಲ್ಲಿ ಪ್ರಸಿದ್ಧನಾಗಲು ಈ ಕೃತ್ಯ ಎಸಗಿದ್ದಾಗಿ ಆತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯು ಕೊಲೆ ಮಾಡಿದ ವ್ಯಕ್ತಿಯೊಬ್ಬನಿಂದ ಕದ್ದಿದ್ದ ಮೊಬೈಲ್ ಫೋನ್ ಟ್ರ್ಯಾಕ್ ಮಾಡಿ ಪೊಲೀಸರು ಆತನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಸೆಕ್ಯುರಿಟಿ ಗಾರ್ಡ್ಗಳು ಮಲಗಿದ್ದ ವೇಳೆಯಲ್ಲಿ ಶಿವಪ್ರಸಾದ್ ಈ ಕೃತ್ಯ ಎಸಗಿದ್ದಾನೆ. ಸಾಗರ್ ಜಿಲ್ಲೆಯಲ್ಲಿ ಮೂವರು, ಭೋಪಾಲ್ನಲ್ಲಿ ಒಬ್ಬರನ್ನು ಈತ ಹತ್ಯೆ ಮಾಡಿದ್ದಾನೆ. ಈ ಪೈಕಿ ಒಂದು ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದರಲ್ಲಿ ಆರೋಪಿಯು ಸೆಕ್ಯುರಿಟಿ ಗಾರ್ಡ್ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ, ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿ, ನಂತರ ತನ್ನನ್ನು ಯಾರೂ ನೋಡಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಂಡು ಪರಾರಿಯಾಗಿದ್ದಾನೆ.
You must be logged in to post a comment Login