Connect with us

    FILM

    ಕರಾವಳಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಟೆಂಪಲ್ ರನ್..ಕಟೀಲು ಹಾಗೂ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

    ಮಂಗಳೂರು: ಎಪ್ರಿಲ್ 14 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಕೆಜಿಎಫ್ 2 ಚಿತ್ರದ ಯಶಸ್ಸಿಗಾಗಿ ರಾಕಿಂಗ್ ಸ್ಟಾರ್ ಯಶ್ ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿದ್ದಾರೆ. ಈಗಾಗಲೇ ಕುಂದಾಪುರ ಆಸುಪಾಸಿನ ದೇವಾಲಯಗಳಲ್ಲಿ ದೇವರ ದರ್ಶನ ಪಡೆದ ಅವರು ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿಕೊಟ್ಟು ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದ್ದರು. ಈ ವೇಳೆ ನಿರ್ಮಾಪಕ ವಿಜಯ್ ಕಿರಂಗದೂರು ಸಹ ಇದ್ದು, ಕೃಷ್ಣನ ದರ್ಶನ ಪಡೆದುಕೊಂಡಿದ್ದರು.


    ನಂತರ ದಕ್ಷಿಣಕನ್ನಡ ಜಿಲ್ಲೆಯ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಯಶ್ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ವತಿಯಿಂದ ಯಶ್ ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ದುರ್ಗಾಪರಮೇಶ್ವರಿಯ ಸನ್ನಿಧಿಯ ಮುಂದೆ ಕೆಲ ಹೊತ್ತು ಧ್ಯಾನದಲ್ಲಿ ಮಗ್ನರಾಗಿದ್ದ ಯಶ್ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು. ಯಶ್ ಅವರನ್ನು ಕಂಡು ಅಭಿಮಾನಿಗಳು ಸಹ ಖುಷಿಪಟ್ಟರು.

    Share Information
    Advertisement
    Click to comment

    You must be logged in to post a comment Login

    Leave a Reply