Connect with us

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್ ದಂಪತಿ..!!

ಪುತ್ತೂರು ಡಿಸೆಂಬರ್ 11: ಕರಾವಳಿಯಲ್ಲಿ ಟೆಂಪಲ್ ರನ್ ನಡೆಸುತ್ತಿರುವ ನಟ ಕಿಚ್ಚ ಸುದೀಪ್ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಸುದೀಪ್ ಸಂಪುಟ ನರಸಿಂಹ ಮಠದಲ್ಲಿ ಆಶ್ಲೇಷ ಪೂಜೆ ಹಾಗೂ ನಾಗಪ್ರತಿಷ್ಠೆ ಪೂಜೆ ನೆರವೇರಿಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು.


2022 ಫೆಬ್ರವರಿಯಲ್ಲಿ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ ರೋಣಾ ಬಿಡುಗಡೆಯಾಗಲಿದ್ದು, ಚಿತ್ರದ ಯಶಸ್ವಿಗಾಗಿ ಸುದೀಪ್ ಕರಾವಳಿಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *