Connect with us

LATEST NEWS

ಮಕ್ಕಳ ಸುರಕ್ಷೆ ವಿಷಯದಲ್ಲಿ ನಿಯಮ ಪಾಲಿಸುವಂತೆ ಆಟೊ ಮತ್ತು ಕ್ಯಾಬ್ ಚಾಲಕರಿಗೆ ಖಡಕ್ ಎಚ್ಚರಿಕೆ

ಮಕ್ಕಳ ಸುರಕ್ಷೆ ವಿಷಯದಲ್ಲಿ ನಿಯಮ ಪಾಲಿಸುವಂತೆ ಆಟೊ ಮತ್ತು ಕ್ಯಾಬ್ ಚಾಲಕರಿಗೆ ಖಡಕ್ ಎಚ್ಚರಿಕೆ

ಉಡುಪಿ ಜೂನ್ 25: ಶಾಲಾ ಕಾಲೇಜುಗಳು ಆರಂಭವಾದ ಹಿನ್ನಲೆ ಉಡುಪಿಯಲ್ಲಿ ಆಟೋ ಕ್ಯಾಬ್ ಚಾಲಕ ಮತ್ತು ಮಾಲಕರ ಸಮಾಲೋಚನೆ ಸಭೆ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ನಡೆಯಿತು.

ಉಡುಪಿಯ ಐಬಿಯಲ್ಲಿ ನಡೆದ ಆಟೊ, ಕ್ಯಾಬ್ ಚಾಲಕ ಮಾಲಕರ ಸಭೆಯಲ್ಲಿ ಆಟೋ ,ಕ್ಯಾಬ್ ಗಳಲ್ಲಿ ಶಾಲೆಗೆ ಹೋಗುವ ವಿದ್ಯಾರ್ಥಿಗಳ ಸುರಕ್ಷೆ ವಿಚಾರವಾಗಿ ಸಮಾಲೋಚನಾ ನಡೆಸಲಾಯಿತು.

ಈ ಸಾಲಿನ ಶಾಲಾ ಕಾಲೇಜು ಪ್ರಾರಂಭವಾದ ಬಳಿಕ ಆಟೋ ಮತ್ತು ಕ್ಯಾಬ್ ಚಾಲಕರ ನಿರ್ಲಕ್ಷ್ಯದ ವಿರುದ್ಧ ಪೋಷಕರ ದೂರುಗಳು ಕೇಳಿ ಬಂದಿದ್ದ ಹಿನ್ನಲೆಯಲ್ಲಿ ತುರ್ತಾಗಿ ಈ ಸಭೆ ಕರೆಯಲಾಗಿತ್ತು.

ಮುಖ್ಯವಾಗಿ ಆಟೋದಲ್ಲಿ ಆರು ವಿದ್ಯಾರ್ಥಿಗಳಿಗಿಂತ ಹೆಚ್ಚು ಮಕ್ಕಳನ್ನು ಕರೆದೊಯ್ಯಬಾರದು ಎಂಬ ನಿಯಮ ಇದೆ. ಆದರೆ ಆಟೋಗಳು ಈ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬುದು ಪ್ರಮುಖ ದೂರು ಬಂದ ಹಿನ್ನಲೆಯಲ್ಲಿ ಸಭೆಯಲ್ಲಿ ಈ ಕುರಿತು ಸಮಾಲೋಚನೆ, ವಿಚಾರ ವಿನಿಮಯ ನಡೆಯಿತು.ನಿಯಮ ಪಾಲಿಸುವಂತೆ ಸಭೆಯಲ್ಲಿ ಟ್ರಾಫಿಕ್ ಪೊಲೀಸರು ಕಟ್ಟುನಿಟ್ಟಿನ‌ ಸೂಚನೆಯನ್ನು ನೀಡಿದ್ದಾರೆ.

ಮಕ್ಕಳ ಸುರಕ್ಷೆ ವಿಷಯದಲ್ಲಿ ಯಾವುದೇ ರಾಜಿ ಮಾಡದೆ ನಿಯಮ ಪಾಲಿಸುವಂತೆ ಆಟೊ ಮತ್ತು ಕ್ಯಾಬ್ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಲಾಯಿತು.ಪ್ರತೀ ಆಟೊ ,ಕ್ಯಾಬ್ ಗಳಲ್ಲಿ ಸಂಚರಿಸುವ ಮಕ್ಕಳ ಹೆಸರು ,ರಕ್ತದ ಗುಂಪು ಸಹಿತ ಪ್ರತಿಯೊಂದನ್ನೂ ತೂಗು ಹಾಕಬೇಕು ಎಂದೂ ತಾಕೀತು ಮಾಡಲಾಯಿತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *