Connect with us

    LATEST NEWS

    ಕಾನೂನು ಸಚಿವ ಸ್ಥಾನ ಕಳೆದುಕೊಂಡ ಕಿರಣ್‌ ರಿಜಿಜು!

    ನವದೆಹಲಿ ಮೇ 18: ನ್ಯಾಯಾಲಯ ಮತ್ತು ಸುಪ್ರೀಂಕೋರ್ಟ್ ನ ಕೊಲಿಜಿಯಂ ಬಗ್ಗೆ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜುಗೆ ಪ್ರಧಾನಿ ನರೇಂದ್ರ ಮೋದಿಯವರು ಕೊಕ್ ನೀಡಿದ್ದು, ಕಾನೂನು ಸಚಿವರಾಗಿದ್ದ ಕಿರಣ್‌ ರಿಜಿಜುಗೆ ಭೂ ವಿಜ್ಞಾನ ಸಚಿವ ಸ್ಥಾನವನ್ನು ನೀಡಲಾಗಿದೆ.

    ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಸಚಿವರಾಗಿರುವ ಅರ್ಜುನ್‌ ರಾಮ್‌ ಮೇಘ್ವಾಲ್‌ ಅವರಿಗೆ ಹೆಚ್ಚುವರಿಯಾಗಿ ಕಾನೂನು ಮತ್ತು ನ್ಯಾಯಾಂಗ ಸಚಿವ ಸ್ಥಾನ ನೀಡಲಾಗಿದೆ ಎಂದು ಈ ಬಗ್ಗೆ ರಾಷ್ಟ್ರಪತಿ ಭವನದ ಮೂಲಗಳು ಖಚಿತಪಡಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಪುಟ ಪುನಾರಚನೆಗೆ ಅನುಮೋದನೆ ನೀಡಿದ್ದಾರೆ. ಇದೀಗ ಕಿರಣ್ ರಿಜಿಜು ಅವರನ್ನು ಕಾನೂನು ಸಚಿವಾಲಯದಿಂದ ಭೂ ವಿಜ್ಞಾನ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ.

    ಅದೇ ಸಮಯದಲ್ಲಿ ರಿಜಿಜು ಬದಲಿಗೆ ಅರ್ಜುನ್ ರಾಮ್ ಮೇಘವಾಲ್​ ಅವರ ಅಸ್ತಿತ್ವದಲ್ಲಿರುವ ಖಾತೆಗೆ ಹೆಚ್ಚುವರಿಯಾಗಿ ಕಾನೂನು ಹಾಗೂ ನ್ಯಾಯ ಸಚಿವಾಲಯ ರಾಜ್ಯ ಸಚಿವರಾಗಿ ಜವಾಬ್ದಾರಿಯನ್ನು ನೀಡಲಾಗಿದೆ. ರಿಜಿಜು ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply