Connect with us

DAKSHINA KANNADA

ಕುವೈಟ್ ಉದ್ಯೋಗಕ್ಕೆ ತೆರಳಿದ್ದ ಮಹಿಳೆಯನ್ನ ರೂಮಿನಲ್ಲಿ ಕೂಡಿಹಾಕಿ ಹಿಂಸೆ….!!

ಪುತ್ತೂರು : ವಿದೇಶಕ್ಕೆ ಉದ್ಯೋಗಕ್ಕೆ ತೆರಳಿದ್ದ ಮಹಿಳೆಯೊಬ್ಬರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿರುವ ಕುರಿತು ಮಹಿಳೆಯು ಪುತ್ತೂರಿನ ದಲಿತ್‌ ಸೇವಾ ಸಮಿತಿ ಮುಖಂಡರೊಬ್ಬರಿಗೆ ಮೊಬೈಲ್‌ ವಾಯ್ಸ ಮೆಸೇಜ್‌ ಸಂದೇಶ ನೀಡಿದ ಘಟನೆ ನಡೆದಿದೆ.


ಮೂಲತಃ ತಮಿಳುನಾಡಿನ ನಿವಾಸಿ, ಉರ್ಲಾಂಡಿಯಲ್ಲಿ ವಾಸ್ತವ್ಯ ಹೊಂದಿರುವ ನಾಗಮ್ಮ ಅವರು 10 ತಿಂಗಳ ಹಿಂದೆ ಉದ್ಯೋಗಕ್ಕೆಂದು ಏಜೆನ್ಸಿಯ ಮೂಲಕ ಕುವೈಟ್‌ಗೆ ತೆರಳಿದ್ದರು. ಅಲ್ಲಿ ಅವರಿಗೆ ಆರೋಗ್ಯದ ಸಮಸ್ಯೆ ಕಾಡಿದ್ದು ಅಲ್ಲಿನ ಸಂಸ್ಥೆಯುವರು ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.

ಈ ಕುರಿತು ಪುತ್ತೂರಿನ ದಲಿತ್‌ ಸೇವಾ ಸಮಿತಿ ಅಧ್ಯಕ್ಷ ಅಣ್ಣಪ್ಪ ಕಾರೆಕ್ಕಾಡು ಅವರಿಗೆ ಮೊಬೈಲ್‌ ವಾಯ್ಸ ಮೆಸೇಜ್‌ ಮಾಡಿದ್ದಾರೆ. ‘ನಾನು ಅನಾರೋಗ್ಯದಿಂದ ಬಳಲುತ್ತಿದ್ದು ನನಗೆ ಸರಿಯಾದ ಔಷಧ ನೀಡುತ್ತಿಲ್ಲ, ಅನಾರೋಗ್ಯ ಇದ್ದರೆ ವಿದೇಶಕ್ಕೆ ಯಾಕೆ ಬಂದದ್ದು ಎಂದು ಬೆದರಿಸಿ ಕೋಣೆಯೊಳಗೆ ಕೂಡಿ ಹಾಕಿದ್ದಾರೆ. ದಿನಕ್ಕೆ ಒಂದು ಹೊತ್ತು ಮಾತ್ರ ಆಹಾರ ನೀಡುತ್ತಿದ್ದಾರೆ. ನನ್ನೊಂದಿಗೆ ಶ್ರೀಲಂಕದ ಮಹಿಳೆಯರು ಇದ್ದಾರೆ ಎನ್ನುವ ಮಾಹಿತಿ ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *