Connect with us

    KARNATAKA

    ಕೊಡಗು : ಕುಡಿದ ಮತ್ತಿನಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ 6 ಜನರ ಸಜೀವ ದಹನ

    ಮಡಿಕೇರಿ ಎಪ್ರಿಲ್ 3: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನದೇ ಕುಟುಂಬ ಆರು ಮಂದಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಜೀವ ದಹನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮುಗುಟಗೇರಿ ಗ್ರಾಮದ ಕಾನೂರು ರಸ್ತೆಯಲ್ಲಿ ನಡೆದಿದೆ.
    ಬೆಂಕಿ ಹಚ್ಚಿದ ದುಷ್ಕರ್ಮಿಯನ್ನು ಎರವರ ಬೋಜ ಎಂದು ಗುರುತಿಸಲಾಗಿದೆ.ಘಟನೆ ನಡೆದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.


    ಬೋಜ ಮತ್ತು ಅವರ ಪತ್ನಿಯ ನಡುವೆ‌ ಮದ್ಯದ ಅಮಲಿನಲ್ಲಿ ಶುಕ್ರವಾರ ರಾತ್ರಿ ಜಗಳ ನಡೆದಿದೆ. ಬಳಿಕ ಬೆಳಗ್ಗಿನ ಜಾವ ಸುಮಾರು 2 ಗಂಟೆ ವೇಳೆಯಲ್ಲಿ ಎರವರ ಬೋಜ ಪಾನಮತ್ತನಾಗಿ ಮನೆಯ ಹೊರ ಬಂದು ಎಲ್ಲಾ ಬಾಗಿಲು, ಕಿಟಕಿಗಳನ್ನು ಮುಚ್ಚಿದ್ದಾನೆ. ಮನೆಯ ಮೇಲೇರಿ ಹಂಚು ತೆಗೆದು ಕುಟುಂಬದ ಸದಸ್ಯರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಅನಿರೀಕ್ಷಿತ ಬೆಳವಣಿಗೆಯಿಂದ ಏನೂ ಮಾಡಲಾಗದೆ ಬೆಂಕಿ ಕೆನ್ನಾಲಗೆಗೆ ಸಿಲುಕಿದ ಸೀತಾ (45), ಬೇಬಿ(40), ಪ್ರಾರ್ಥನಾ(6) ಮೂವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.


    ಘಟನೆಯಲ್ಲಿ ಗಾಯಗೊಂಡಿದ್ದ ಮೂವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ಆರು ಮಂದಿ ಬಲಿಯಾಗಿದ್ದಾರೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊನ್ನಂಪೇಟೆ ಪೊಲೀಸರು ಆರೋಪಿ ಬೋಜನ ಪತ್ತೆಗಾಗಿ ಬಲೆ ಬೀಸಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply