Connect with us

    BELTHANGADI

    ಕೊಕ್ಕಡ – ಭಗವಾಧ್ವಜ ವನ್ನು ನೆಲಕ್ಕುರುಳಿಸಿ ಹಾನಿ

    ಬೆಳ್ತಂಗಡಿ ಎಪ್ರಿಲ್ 18: ಭಗವಾಧ್ವಜಕಟ್ಟೆಗೆ ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕಿಡಿಗೇಡಿಗಳು ನೆಲಕ್ಕುರುಳಿಸಿದ ಘಟನೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ಎಪ್ರಿಲ್ 17ರ ರಾತ್ರಿ ಸಂಭವಿಸಿದೆ.


    ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಎಂಬಲ್ಲಿ ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಭಗವಾಧ್ವಜವನ್ನು ಸ್ಥಾಪಿಸಿದ್ದರು. ಆದರೆ ಶನಿವಾರ ರಾತ್ರಿ ಈ ಭಗವಾಧ್ವಜ ಹಾಗೂ ಅದರ ಕಂಬ ಬುಡ ಸಮೇತ ಮುರಿದು ರಸ್ತೆಗೆ ಬಿದ್ದಿತ್ತು. ಇದು ಉದ್ದೇಶ ಪೂರ್ವಕವಾಗಿಯೇ ಮಾಡಿರುವ ಕೆಲಸ ಎಂದು ಸ್ಥಳೀಯರು ಆರೋಪಿಸಿದ್ದಾರೆ.


    ಈ ಘಟನೆ ಕುರಿತಂತೆ ಸ್ಥಳೀಯ ಶಾಸಕ ಹರೀಶ್ ಪೂಂಜಾ ಅವರಿಗೆ ಮಾಹಿತಿ ನೀಡಿದ್ದು, ಈ ಕೃತ್ಯವನ್ನು ಖಂಡಿಸಿರುವ ಅವರು ಮತ್ತದೇ ಹಾಳುಗೆಡಹಿದ ಜಾಗದಲ್ಲಿ ಭಗವಾಧ್ವಜವನ್ನು ಹಾರಾಡುವಂತೆ ಮಾಡುವುದಾಗಿ ಹೇಳಿದರು. ಅಲ್ಲದೆ ಇನ್ನು ಮುಂದೆ ಇಂತಹ ದುಷ್ಕೃತ್ಯ ಮರುಕಳಿಸಿದರೆ ಪರಿಣಾಮ ಬೇರೆ ರೀತಿಯೇ ಆಗಿರುತ್ತದೆ ಎಂದು ದುಷ್ಕರ್ಮಿಗಳಿಗೆ ಈ ಸಂದರ್ಭ ಎಚ್ಚರಿಕೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply