BANTWAL
ಕಾರ್ಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬಂಟ್ವಾಳ : ಕರಾವಳಿಯ ಕಾರ್ಣಿಕದ ದೈವಸ್ಥಾನವಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷಾವಧಿ ಕೋಲ ನಡೆಯಿತು.
ಬೆಳಿಗ್ಗೆ ಗಣಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದು, ಬಳಿಕ ನಾಗತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಪ್ರದಾಯದಂತೆ ಭಂಡಾರದ ಮನೆಯಿಂದ ದೈವಗಳ ಭಂಡಾರ ಆಗಮಿಸಿ ದೈವಗಳಿಗೆ ಕೋಲ ಸೇವೆ ನಡೆಯಿತು. ಇದರ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜ್ರಂಭಣೆಯಿಂದ ನಡೆಯಿತು. ಕ್ಷೇತ್ರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ರಮಾನಾಥ ರೈ, ಆರ.ಎಸ್.ಎಸ್.ಪ್ರಮುಖ ಕಲ್ಲಡ್ಕ ಡಾ| ಪ್ರಭಾಕರ್ ಭಟ್, ಜಿ.ಪಂ.ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ, ಪದ್ಮರಾಜ್ ಸೇರಿದಂತೆ ಅನೇಕ ಗಣ್ಯರು ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login