Connect with us

    KARNATAKA

    ಕೋಲಾರ : ಮರಕ್ಕೆ ಡಿಕ್ಕಿಹೊಡೆದ ಐಷಾರಾಮಿ ಕಾರು, ಮೂವರು ವಿದ್ಯಾರ್ಥಿಗಳು ಮೃತ್ಯು..! 

    ಕೋಲಾರ: ಐಷಾರಾಮಿ ಆಡಿ (Audi) ಕಾರು ಮರಕ್ಕೆ ಡಿಕ್ಕಿ ಹೊಡೆದ ಕಾರಣ ಕಾರ್​ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ‌ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ.

     

    ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಮತ್ತೋರ್ವ ವಿದ್ಯಾರ್ಥಿ  ಬಂಗಾರಪೇಟೆಯ ಸಾಯಿ ಗಗನ್ ದುರಂತದಲ್ಲಿ ಆಶ್ಚರ್ಯ ರೀತಿಯಲ್ಲಿ ಪಾರಾಗಿದ್ದಾನೆ.  ಮೃತಪಟ್ಟ ಮೂವರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿಗಗನ್ ಸೋದರಿ ಮದುವೆ ಆಮಂತ್ರಣ ಹಂಚಲು ಸ್ನೇಹಿತರೆಲ್ಲ ಕಾರಿನಲ್ಲಿ ಹೊರಟಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply