Connect with us

LATEST NEWS

ಕೊಲ್ಲೂರು – ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಖಾಸಗಿ ಬಸ್ – 17 ವಿಧ್ಯಾರ್ಥಿಗಳಿಗೆ ಗಾಯ

ಕುಂದಾಪುರ ಜುಲೈ 22: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿ ಘಾಟಿ ಬಳಿ ಸೋಮವಾರ ನಡೆದಿದೆ.


ಈ ಘಟನೆಯಲ್ಲಿ 17 ವಿಧ್ಯಾರ್ಥಿಗಳು ಸೇರಿದಂತೆ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರೆಲ್ಲರೂ ಮಲೆನಾಡು ಭಾಗದ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.

ಶಾಲೆಗೆ ನಿರಂತರ ರಜೆಯಿದ್ದ ಹಿನ್ನೆಲೆಯಲ್ಲಿ ಮನೆಗೆ ತೆರಳಿದ್ದ ಅವರು ಸೋಮವಾರ ಮತ್ತೆ ಶಾಲೆಗೆ ವಾಪಸ್ಸಾಗುತ್ತಿದ್ದರು. ಬೆಳಗ್ಗೆ ಮಳೆ ಹೆಚ್ಚಿದ್ದರಿಂದ ಘಾಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಬಸ್ಸಿನ ಮುಂಭಾಗ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ, ಕೊಲ್ಲೂರು ಪಿಎಸ್ಸೈ ವಿನಯ್ ಎಂ. ಕೊರ್ಲಹಳ್ಳಿ, ಪಿಎಸ್ಸೈ ಸುಧಾರಾಣಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *