DAKSHINA KANNADA
ಕೊಂಬೆಟ್ಟು ಹಲ್ಲೆ ಪ್ರಕರಣ – ಅಪ್ರಾಪ್ತ ವಿದ್ಯಾರ್ಥಿಗಳು ಪೋಲೀಸ್ ವಶಕ್ಕೆ – ಹಿಂದೂ ಜಾಗರಣ ವೇದಿಕೆಯಿಂದ ಠಾಣೆಗೆ ಮುತ್ತಿಗೆ
ಪುತ್ತೂರು ನವೆಂಬರ್ 26: ಕೊಂಬೆಟ್ಟು ಕಾಲೇಜು ವಿಧ್ಯಾರ್ಥಿಗಳ ಹೊಡೆದಾಟ ಪ್ರಕರಣ ದಿನದಿಂದ ದಿನಕ್ಕೆ ಕಂಗಟ್ಟಾಗುತ್ತಿದ್ದು, ಇದೀಗ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವಿಧ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ಪುತ್ತೂರಿನ ಕೊಂಬೆಟ್ಟು ಸರಕಾರಿ ಪಿ.ಯು.ಕಾಲೇಜು ವಿದ್ಯಾರ್ಥಿಗಳ ನಡುವೆ ನಡೆಯುತ್ತಿರುವ ಗಲಾಟೆ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ ಪ್ರಕರಣ ಹಲ್ಲೆ ನಡೆಸಿದ ಅಪ್ರಾಪ್ತ ವಿದ್ಯಾರ್ಥಿಗಳು ಪುತ್ತೂರು ಪೋಲೀಸ್ ವಶಕ್ಕೆ ಪಡೆದ ಹಿನ್ನಲೆ ಪೋಲೀಸ್ ವಶದಲ್ಲಿರುವ ವಿದ್ಯಾರ್ಥಿಗಳನ್ನು ಬಿಡುವಂತೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪುತ್ತೂರು ಮಹಿಳಾ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ಕೇವಲ ಒಂದು ಕಡೆಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಈ ನಡುವೆ ಪುತ್ತೂರು ಡಿವೈಎಸ್ಪಿ, ಸಂಘಟನೆ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ಕೂಡ ನಡೆದಿದೆ.
You must be logged in to post a comment Login