KARNATAKA
ಕೊಪ್ಪಳ – ರಾಷ್ಟ್ರೀಯ ಹೆದ್ದಾರಿ ಬ್ರಿಡ್ಜ್ ಗೆ ಗುದ್ದಿದ ಕಾರು – ನಾಲ್ವರ ಸಾವು
ಕೊಪ್ಪಳ ಫೆಬ್ರವರಿ 16: ವೇಗವಾಗಿ ಬಂದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಬ್ರಿಡ್ಜ್ ಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪದ ಬಳಿ ನಡೆದಿದೆ.
ಕಾರಿನಲ್ಲಿದ್ದವರು ತೆಲಂಗಾಣದವರಾಗಿದ್ದು, ಇಬ್ಬರು ಪುರುಷರು ಹಾಗಬ ಇಬ್ಬರ ಮಹಿಳೆಯರಿದ್ದು, ನಾಲ್ವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯಿಂದ ಗದಗ ಮಾರ್ಗದಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಮೃತಪಟ್ಟವರ ವಿವರ ಹುಡುಕಲಾಗುತ್ತಿದೆ ಎಂದು ಹೇಳಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನ ಬಿಡಿಭಾಗಗಳು ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
You must be logged in to post a comment Login