LATEST NEWS
ಸಚಿವ ಕೋಟ ಬೆಂಗಾವಲು ಪೊಲೀಸ್ ವಾಹನ ಪಲ್ಟಿ….ಅಪಾಯದಿಂದ ಪಾರಾದ ಸಿಬ್ಬಂದಿ
ಬ್ರಹ್ಮಾವರ ಜುಲೈ 12: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಬೆಂಗಾವರು ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾದ ಘಟನೆ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸಿಎಂ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋಟದಿಂದ ಹೊರಟಿದ್ದರು. ಉಡುಪಿ ಜಿಲ್ಲಾ ಪೊಲೀಸರು ಬೆಂಗಾವಲು ವಾಹನ ಸಚಿವರ ಜೊತೆ ಹೊರಟಿತ್ತು, ಆದರೆ ಬೆಂಗಾವರು ವಾಹನ ಮುಂದೆ ಸಂಚರಿಸುತ್ತಿದ್ದ ಲಾರಿಯೊಂದು ಯಾವುದೇ ಸೂಚನೆ ನೀಡದೇ ಪಥ ಬದಲಿಸಿದ ಕಾರಣ ಪೊಲೀಸ್ ವಾಹನದ ಚಾಲಕನ ನಿಯಂತ್ರಣ ತಪ್ಪಿ ವಾಹನ ಡಿವೈಡರ್ ಮೇಲೆರಿ ಪಲ್ಟಿಯಾಗಿದೆ.
ವಾಹನದಲ್ಲಿ ಬೆಂಗಾವಲು ಪೊಲೀಸ್ ಸಿಬ್ಬಂದಿ ಗಣೇಶ್ ಆಳ್ವ ರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸಚಿವ ಕೋಟ ಅವರು ಗಾಯಾಳು ಸಿಬ್ಬಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
You must be logged in to post a comment Login