Connect with us

    LATEST NEWS

    ಚುನಾವಣೆ ಟಿಕೆಟ್ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ – ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ ಮಾರ್ಚ್ 02: ಮುಂಬರುವ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಹರ್ಷನ ಸಹೋದರಿ ಅಶ್ವಿನಿಗೆ ಬಿಜೆಪಿ ಟಿಕೆಟ್ ನೀಡಿದರೆ ಕಾಂಗ್ರೆಸ್ ಕ್ಯಾಂಡಿಟೇಟ್ ಹಾಕುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ಉಡುಪಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸಿಗರು ಯಾರು ಟಿಕೆಟ್ ಕೊಡಲು ಹೇಳಲು?ಟಿಕೆಟ್ ಬಗ್ಗೆ ನಮ್ಮ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ, ಈ ವಿಚಾರದಲ್ಲಿ ಕಾಂಗ್ರೆಸ್ ನವರದ್ದು ಬೇಜವಾಬ್ದಾರಿ ಹೇಳಿಕೆ ಎಂದರು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 23 ಹಿಂದೂ ಕಾರ್ಯಕರ್ತರ ಹತ್ಯೆಗಳಾಗಿವೆ. ಅಂದು ಕಾಂಗ್ರೆಸಿಗರ ಹೇಳಿಕೆ ಏನಿತ್ತು ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ. ನೀವು ಮೂಲಭೂತವಾದಿ ಸಂಘಟನೆಯವರಿಗೆ ಬೆಂಬಲ ನೀಡಿ ಪೋಷಿಸಿದಿರಿ, ಅವರ ಕೇಸ್ ವಾಪಾಸು ಪಡೆದಿದ್ದರಿಂದಲೇ ಇವತ್ತು ಕೊಲೆ ಕೃತ್ಯ ನಡೆಯುತ್ತಿದೆ ಎಂಬುವುದು ನೆನಪಿರಲಿ” ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ನಮ್ಮ ಸರಕಾರ ಹತ್ಯೆಯಾದ ಹರ್ಷನ ಕುಟುಂಬಕ್ಕೆ ಸಂಪೂರ್ಣ ನೆರವು ನೀಡಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply