LATEST NEWS
ಕೇಸರಿ ಶಾಲು ರಾಜ್ಯದಲ್ಲಿ ನಿಷೇಧ ಆಗಿಲ್ಲ – ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು ಮೇ 24: ಕೇಸರಿ ಶಾಲು ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿದ್ದಾಗ ಯಾವ ಪೊಲೀಸರು ಕೇಸರಿ ಶಾಲು ಹಾಕಿಲ್ಲ ಆದರೂ ಅವರ ಖಾಸಗಿ ಜೀವನದಲ್ಲಿ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಸರಕಾರ ಬಂದಿದ್ದು, ಇನ್ನು ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿಣ ದಿನವಾಗಲಿದೆ. ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆಯ ನಿಷೇಧ ಮಾಡುವ ಕಾರ್ಯತಂತ್ರಗಳು ರೂಪುಗೊಂಡಿದೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ಪೊಲೀಸರಿಗೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ. ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದಲ್ಲಿ ಅವರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.
ಸಿದ್ದರಾಮಯ್ಯ ಮತ್ತು ಡಿಕೆಶಿ 40% ಕಮಿಷನ್ ತನಿಖೆ ಮಾಡುತ್ತೇವೆ ಎಂದಿದ್ದಾರೆ. ಈ ತನಿಖೆಯನ್ನು ಮುಕ್ತವಾಗಿ ನಾನು ಸ್ವಾಗತ ಮಾಡುತ್ತೇನೆ. ನನ್ನಿಂದಲೇ ತನಿಖೆ ಪ್ರಾರಂಭವಾಗಲಿ. ಇಡೀ ತನಿಖೆ ಮಾಡಲಿ, ಯಾವ ತನಿಖೆಯಲ್ಲಿ ಏನಾಗುತ್ತೆ ನೋಡೋಣ. ವ್ಯಕ್ತಿಗತ ದ್ವೇಷಕ್ಕೆ ಅವಕಾಶ ಕೊಡಬಾರದು. ಆದರೂ ತನಿಖೆ ಮಾಡಲಿ ಎಂದು ತಿರುಗೇಟು ನೀಡಿದರು.
You must be logged in to post a comment Login