Connect with us

LATEST NEWS

ಕೊರೋನಾ ಸೋಂಕಿಗೆ ತುತ್ತಾಗಿದ್ದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಗುಣಮುಖ,ಆಸ್ಪತ್ರೆಯಿಂದ ಡಿಸ್ಚಾರ್ಜ್

ಉಡುಪಿ ಎಪ್ರಿಲ್ 22: ಕೊರೊನಾ ಸೊಂಕಿಗೆ ತುತ್ತಾಗಿದ್ದ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.


ಹದಿನಾಲ್ಕು ದಿನಗಳ ಹಿಂದೆ ಸಚಿವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು.ಉಡುಪಿಯ ಆದರ್ಶ್ ಆಸ್ಪತ್ರೆಯಲ್ಲಿ ಎರಡು ವಾರಗಳ ಚಿಕಿತ್ಸೆ ಬಳಿಕ ಅವರಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.


ಎರಡು ವಾರಗಳ ಚಿಕಿತ್ಸೆ ಬಳಿಕ ನಾನು ಸಂಪೂರ್ಣ ಗುಣಮುಖನಾಗಿದ್ದೇನೆ.ನಾಳೆಯಿಂದ ಕೆಲಸಕ್ಕೆ ಹಾಜರಾಗುತ್ತೇನೆ.ಆಸ್ಪತ್ರೆಯ ವೈದ್ಯರಾದ ಡಾ.ಚಂದ್ರಶೇಖರ್ ಅವರಿಗೆ ನಾನು ಮತ್ತು ನನ್ನ ಕುಟುಂಬ ಚಿರಋಣಿ ಆಗಿದ್ದೇವೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *