Connect with us

LATEST NEWS

ಸಿದ್ದರಾಮಯ್ಯ , ರಾಹುಲ್ ಗಾಂಧಿಗೆ ನಾಮ ಚುನಾವಣೆಯ ಸಂಕೇತ – ಕೋಟ ಶ್ರೀನಿವಾಸ ಪೂಜಾರಿ

ಸಿದ್ದರಾಮಯ್ಯ , ರಾಹುಲ್ ಗಾಂಧಿಗೆ ನಾಮ ಚುನಾವಣೆಯ ಸಂಕೇತ – ಕೋಟ ಶ್ರೀನಿವಾಸ ಪೂಜಾರಿ

ಉಡುಪಿ ಮಾರ್ಚ್ 6: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿಲಕ ಇಟ್ಟುಕೊಂಡವರನ್ನು ನೋಡಿದರೆ ಭಯವಾಗುತ್ತದೆ ಎಂಬ ಹೇಳಿಕೆಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.

ಕುಂಕುಮ ಹಾಕಿದವರು ಸಿದ್ದರಾಮಯ್ಯಗೆ ಭಯೋತ್ಪಾದಕರಂತೆ ಕಾಣ್ತಾರೆ, ಸಿದ್ದರಾಮಯ್ಯ ಅವರ ಹೇಳಿಕೆಗೆ ನಾವು ಪ್ರತಿಕ್ರಿಯೆ ನೀಡಬೇಕಾಗಿಲ್ಲ, ಚುನಾವಣೆ ಸಂದರ್ಭ ನಾಮಪತ್ರ ಹಾಕುವಾಗ ಸಿದ್ದರಾಮಯ್ಯ ನಾಮ ಧರಿಸಿದ್ದನ್ನು ಕಂಡಿದ್ದೇನೆ, ಚುನಾವಣೆ ಮುನ್ನಾ ದಿನ ನಾಮ ಧರಿಸಿ ದೇವಸ್ಥಾನಕ್ಕೆ ಕೂಡ ಹೋಗಿದ್ದಾರೆ. ಕಾಂಗ್ರೇಸ್ ಅಧ್ಯಕ್ಷ ರಾಹುಲ್ ಗಾಂಧಿ ದೇವಸ್ಥಾನಕ್ಕೆ ಭೇಟಿ ಕೊಡುವಾಗ ಉದ್ದದ ನಾಮ ಧರಿಸುತ್ತಾರೆ.

ಸಿದ್ದರಾಮಯ್ಯ , ರಾಹುಲ್ ಗಾಂಧಿಗೆ ನಾಮ ಚುನಾವಣೆಯ ಸಂಕೇತ ಆದರೆ ಬಿಜೆಪಿಗೆ ನಾಮ, ಖಾವಿ ಆಧ್ಯಾತ್ಮ ದ ಸಂಕೇತವಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಗೆ ಚುನಾವಣೆ ಬಂದಾಗ ನಾಮ, ಖಾವಿ, ದೇವಸ್ಥಾನ ನೆನಪಾಗ್ತದೆ.

ಯೋಗಿ ಆದಿತ್ಯನಾಥ್ ಖಾವಿ ಧರಿಸಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವುದಕ್ಕೆ ತಿರುಗೇಟು ನೀಡಿದ ಕೋಟ , ಯೋಗಿ ಅವರು ಸಿಎಂ ಆಗಿ ಮಾಡಿದ ಕೆಲಸ ಎಲ್ಲರೂ ಮೆಚ್ಚುತ್ತಾರೆ. ಒಬ್ಬ ರಾಷ್ಟ್ರಭಕ್ತನ ಅವಹೇಳನ ಮಾಡಿದರೆ ಚುನಾವಣೆ ಯಲ್ಲಿ ಜನ ಪಾಠ‌ಕಲಿಸ್ತಾರೆ ಎಂದು ಹೇಳಿದರು.

ಬಿಜೆಪಿ ನಾಮದ ಸಂಕೇತವನ್ನು ಹಾಳು ಮಾಡಿಲ್ಲ ಆದರೆ ಚುನಾವಣೆಗಾಗಿ ನಾಮದ ಸಂಕೇತವನ್ನು ಹಾಳು ಮಾಡಲು ಹೊರಟ ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *