LATEST NEWS
ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ಸೊಂಕು – ನೇಮೋತ್ಸವದಲ್ಲಿ ಭಾಗವಹಿಸಿದವರ Covid-19 ಟೆಸ್ಟ್ …?
ಮಂಗಳೂರು ಎಪ್ರಿಲ್ 10: ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಉಸ್ತುವಾರಿ ಸಚಿವ ಕೋಟ ಕೊರೊನಾ ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
ಈ ನಡುವೆ ಕಳೆದ ಎರಡು ದಿನಗಳ ಹಿಂದೆ ಸಂಸದ ನಳಿನ್ ಕುಮಾರ್ ಕಟೀಲ್ ಕುಟುಂಬದಲ್ಲಿ ನಡೆದ ನೇಮೋತ್ಸವ ಕಾರ್ಯಕ್ರಮದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪಾಲ್ಗೊಂಡಿದ್ದರು. ರಾಜ್ಯದ ಬಹುತೇಕ ಸಚಿವರು, ಶಾಸಕರು ಈ ಕಾರ್ಯಕ್ರದಲ್ಲಿ ಪಾಲ್ಗೊಂಡಿದ್ದು, ಸಾವಿರಾರು ಜನರು ಈ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಈಗ ಉಸ್ತುವಾರಿ ಸಚಿವರಿಗೆ ಕೊರೊನಾ ಬಂದ ಹಿನ್ನಲೆ ಸಚಿವರ ಸಂಪರ್ಕಕ್ಕೆ ಬಂದವರ ಕೊರೊನಾ ಪರೀಕ್ಷೆಯನ್ನು ಜಿಲ್ಲಾಡಳಿತ ನಡೆಸಲಿದೆಯಾ ಎನ್ನುವುದನ್ನು ಕಾದು ನೋಡಬೇಕಿದೆ.
You must be logged in to post a comment Login