Connect with us

    LATEST NEWS

    ನಗರಾಡಳಿತ ಚುನಾವಣೆ – ಅತಂತ್ರ ಇರುವಲ್ಲಿ ಬಿಜೆಪಿ ಅಧಿಕಾರಕ್ಕೆ – ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ ಸೆಪ್ಟೆಂಬರ್ 06: ಜನರ ಸಮಸ್ಯೆಯನ್ನು ಬಗೆ ಹರಿಸುವ ಶಕ್ತಿ ಬಿಜೆಪಿಗೆ ಇದೆ ಎನ್ನುವುದು ನಗರಾಡಳಿತ ಚುನಾವಣೆ ಫಲಿತಾಂಶದಿಂದ ತಿಳಿದು ಬಂದಿದ್ದು, ಇಡೀ ರಾಜ್ಯದಲ್ಲಿ ಬಿಜೆಪಿಯ ವಾತಾವರಣ ಉತ್ತಮ ಆಗುತ್ತಿದೆ ಎಂದು ಸಚಿವ ಕೋಟ ಶ್ರೀನಿನಾಸ ಪೂಜಾರಿ ಹೇಳಿದ್ದಾರೆ.


    ಉಡುಪಿಯಲ್ಲಿ ಮಾತನಾಡಿದ ಅವರು ಸಮಸ್ಯೆ ಬಗೆಹರಿಸುವ ಶಕ್ತಿ ಬಿಜೆಪಿಗೆ ಇದೆ ಎಂದು ಜನ ಮತ ಹಾಕಿದ್ದಾರೆ. ಉತ್ತಮ ಆಡಳಿತ ಕೊಡಲು ಯೋಚನೆ ಮತ್ತು ಯೋಜನೆಗಳನ್ನು ಹಾಕಿಕೊಳ್ಳುತ್ತೇವೆ. ಎಲ್ಲಾ ಮತದಾರರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಇನ್ನು ಅತಂತ್ರ ಇರುವಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದ ಅವರು ಈ ಚುನಾವಣೆಯಲ್ಲಿ ಜೆಡಿಎಸ್ ಯಾಕೆ ಸೈಲೆಂಟ್ ಆಗಿದ್ದರೆ ಗೊತ್ತಿಲ್ಲ, ಜೆಡಿಎಸ್ ಸ್ಪರ್ಧೆ ಮಾಡದಿರುವಲ್ಲಿ ನಮ್ಮ ಸ್ಥಾನಗಳು ಹೆಚ್ಚಾಗಿದೆ ಎಂದರು.

    ಕಾಂಗ್ರೆಸ್‌ ನ ಅಪಪ್ರಚಾರ ರಾಜ್ಯದ ಜನಕ್ಕೆ ಅರ್ಥ ಆಗಿದೆ, ಕಾಂಗ್ರೆಸ್‌ ನ ಪ್ರಚಾರ ಮತ್ತು ಅಪಪ್ರಚಾರದಲ್ಲಿ ತಿರುಳಿಲ್ಲ, ಜನ ಬಿಜೆಪಿ ಮೋದಿಯ ಕಾರ್ಯಶೈಲಿಗೆ ಮತ ಹಾಕಿದ್ದಾರೆ. ಸಿಎಂ ಬೊಮ್ಮಾಯಿ ಮತ್ತು ಸಂಘಟನಾತ್ಮಕ ಚಟುವಟಿಕೆಯನ್ನು ಜನ ಗೆಲ್ಲಿಸಿದ್ದಾರೆ. ಜನಪರವಾಗಿರುವ ಬಿಜೆಪಿಯವರಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply