Connect with us

    UDUPI

    ಜನಜಾಗೃತಿ ಮೂಲಕ ಕೊರೊನಾ ನಿಯಂತ್ರಣಕ್ಕೆ ತರುವ ವಿಶ್ವಾಸವಿದೆ – ಕೋಟ

    ಉಡುಪಿ ಜುಲೈ 18: ಎಷ್ಟೇ ನಿಯಂತ್ರಣ ಮಾಡಿದರೂ ಕೂಡಾ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದೆ, ಹೀಗಾಗಿ‌ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೊನಾ ನಿಯಂತ್ರಣಕ್ಕೆ ಬೇಕಾದ ಎಲ್ಲಾ ರೀತಿಯ ಕೆಲಸಗಳನ್ನು ಸರಕಾರ ಮಾಡುತ್ತಿದೆ‌ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ‌ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.


    ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನಿನ್ನೆ ನಾನು ಡಿಸಿಎಂ ಮತ್ತು ಸಿಎಂ ಅವರನ್ನು‌ ಭೇಟಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಂದಿನ ಎರಡು ತಿಂಗಳ ಕಾಲ ಕೊರೊನಾವನ್ನು ಹೇಗೆ ನಿಯಂತ್ರಿಸಬೇಕು ಎಂಬ ಕುರಿತಾಗಿ ಅಧಿಕಾರಿಗಳ ಜೊತೆ ಸೇರಿ ಚರ್ಚೆ ಮಾಡಿದ್ದೆವೆ. ಎಲ್ಲಾ ಖಾಸಗಿ, ಸರಕಾರಿ ಆಸ್ಪತ್ರೆಗಳನ್ನು ಸುಸಜ್ಜಿತ ವಾಗಿ ಇಡಲಾಗಿದೆ. ಕೊರೊನಾ ವನ್ನು ಜನಜಾಗೃತಿ ಮೂಲಕ ನಿಯಂತ್ರಣಕ್ಕೆ ತರುತ್ತೆವೆ ಎಂಬ ವಿಶ್ವಾಸ ಸರಕಾರಕ್ಕೆ ಇದೆ ಎಂದರು.


    ಮಂಗಳೂರು, ಬೆಂಗಳೂರು ಗಳಲ್ಲಿ ಅಂತರಾಷ್ಟ್ರೀಯ ಮಟ್ಟದ ಪ್ರಯಾಣಿಕರು ಆಗಮಿಸುತಿದ್ದಾರೆ, ಇಲ್ಲಿ ಸಾಮಾನ್ಯ ಜನರ ನಡುವೆ ಕೊರೊನಾ ಬೆಳವಣಿಗೆ ಕಾಣುತ್ತಿದೆ ಎಂಬುವುದನ್ನು ನಾವು ಕಂಡಿದ್ದೇವೆ, ಇದಕ್ಕಾಗಿ ಸರಕಾರ ಸನ್ನದವಾಗಿದೆ. ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಇಡೀ ಸರಕಾರ ಹೋರಾಟ ಮಾಡುತ್ತಿದೆ. ಜನಸಾಮಾನ್ಯರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೊನಾ ವಿರುದ್ದ ಗೆಲ್ಲಲು ಸಹಕರಿಸಬೇಕು ಎಂದರು.

    ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳ ಸ್ಥಿತಿಗತಿಗಳ ಕುರಿತು ಮಾತನಾಡಿದ ಸಚಿವರು ” ನಿನ್ನೆ ಡಿಸಿಎಂ ಅಶ್ವತನಾರಾಯಣ ಜೊತೆ ಮಾತನಾಡಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗೆ ಬೇಕಾದ ಐಸಿಯು, ಆ್ಯಂಬುಲೆನ್ಸ್ ಗಳನ್ನು ಮಂಜೂರು ಮಾಡಲು ಕೇಳಿಕೊಂಡಿದ್ದೇನೆ. ಜಿಲ್ಲಾದಿಕಾರಿಗಳಿಗೆ ಬೇಕಾದಷ್ಟು ಸಾಮಾಗ್ರಿಗಳನ್ನು ಸರಕಾರ ನಿಡಲು ಸಿದ್ದವಿದೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply