LATEST NEWS
ಕೋಟೇಶ್ವರ – ಕೊಡಲಿಯಿಂದ ಕಡಿದು ತಂದೆಯನ್ನು ಕೊಂದ ಮಗ
ಕುಂದಾಪುರ ಮಾರ್ಚ್ 20: ಕೌಟುಂಬಿಕ ದ್ವೇಷಕ್ಕೆ ಮಗನೇ ತನ್ನ ತಂದೆಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ನಡೆದಿದೆ.
ಕೊಲೆಯಾದವರನ್ನು ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ(74) ಎಂದು ಗುರುತಿಸಲಾಗಿದ್ದು. ಆರೋಪಿ ಪುತ್ರನನ್ನು ರಾಘವೇಂದ್ರ (36) ಎಂದು ಗುರುತಿಸಲಾಗಿದೆ. ಕೌಟುಂಬಿಕ ದ್ವೇಷ ಹಿನ್ನೆಲೆಯಲ್ಲಿ ಮಗ ತಂದೆಯನ್ನೇ ಸಣ್ಣ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕುಂದಾಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You must be logged in to post a comment Login