LATEST NEWS
ಕೋಟೇಶ್ವರ – ನಿರುಪಯುಕ್ತ ನೀರಿನ ಬೃಹತ್ ಟ್ಯಾಂಕ್ ತೆರವುಗೊಳಿಸಿದ ಅಧಿಕಾರಿಗಳು…!!
ಉಡುಪಿ ಅಕ್ಟೋಬರ್ 12: ಕೋಟೇಶ್ವರದಲ್ಲಿ ರಾಷ್ಟ್ರೀಯ ಹೆದ್ದಾರಿ ಸಮೀಪ ಇರುವ ನಿರುಪಯುಕ್ತ ಬೃಹತ್ ನೀರಿನ ಟ್ಯಾಂಕ್ ಒಂದನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಈ ನಡುವೆ ನೀರಿನ ಟ್ಯಾಂಕರ್ ತೆರವು ಕಾರ್ಯಾಚರಣೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೇರೆ ರೀತಿ ವ್ಯಾಖ್ಯಾನಿಸುತ್ತಿದ್ದಾರೆ.
ಉಡುಪಿಯ ಕೋಟೆಶ್ವರದಲ್ಲಿ ನಿರುಪಯುಕ್ತವಾಗಿದ್ದ ನೀರಿನ ಬೃಹತ್ ಟ್ಯಾಂಕ್ನ್ನು ಸುರಕ್ಷಿತ ಕ್ರಮ ತೆಗೆದುಕೊಂಡು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಹೈವೆಗೆ ನೀರಿನ ಟ್ಯಾಂಕ್ ಬಿದ್ದು ಅವಘಡ ಸಂಭವಿಸಿದೆ ಅಂತ ವೈರಲ್ ಆಗುತ್ತಿದೆ.
ಕಳೆದ 15 ವರ್ಷಗಳಿಂದ ನಿರುಪಯುಕ್ತವಾಗಿದ್ದ ನೀರಿನ ಬೃಹತ್ ಟ್ಯಾಂಕ್ನ್ನು ಸತತ 9 ಗಂಟೆಗಳ ಕಾರ್ಯಾಚರಣೆ ನಡೆಸಿ, ಕೋಟೇಶ್ವರ ಗ್ರಾಮ ಪಂಚಾಯತ್ ವಿವಿಧ ಇಲಾಖೆಗಳ ಸಹಕಾರದಲ್ಲಿ ತೆರವುಗೊಳಿಸಿತ್ತು. ಈ ವೇಳೆ ಸುರಕ್ಷಿತ ಕ್ರಮ ಕೈಗೊಂಡು ಹೈವೇ ಕೂಡ ಕೆಲ ನಿಮಿಷಗಳ ಕಾಲ ಬಂದ್ ಮಾಡಲಾಗಿದ್ದು, ಹೀಗಾಗಿ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಸದ್ಯ ನೀರಿನ ಟ್ಯಾಂಕ್ ಮಗುಚಿ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ಜನ ಇದನ್ನು ಬೇರೆ ರೀತಿಯಲ್ಲಿ ವ್ಯಾಖ್ಯಾನಿಸುತ್ತಿದ್ದಾರೆ.
You must be logged in to post a comment Login