Connect with us

    LATEST NEWS

    ನಾನು ಎರಡು ಭಾರಿ ಸ್ಪರ್ಧಿಸಿ ಸೋತಿದ್ದೇನೆ..ಇನ್ನು ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸೋಲ್ಲ – ಸಚಿವ ಕೃಷ್ಣ ಬೈರೇಗೌಡ

    ಮಂಗಳೂರು ಮಾರ್ಚ್ 09: ನಾನು ಈಗಾಗಲೇ ಪಕ್ಷ ಸೂಚಿಸಿದ್ದಕ್ಕೆ ಎರಡು ಭಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋತಿದ್ದೆನೆ, ಆದ್ದರಿಂದ ಈ ಬಾರಿ ಯಾವುದೇ ಕಾರಣಕ್ಕೆ ಸ್ಪರ್ಧೆ ಮಾಡೋಲ್ಲ ಎಂದು ಪಕ್ಷದ ವರಿಷ್ಠರು ಸ್ಪಷ್ಟವಾಗಿ ಸೂಚಿಸಿದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.


    ಕೆಲವು ಕ್ಷೇತ್ರಗಳಲ್ಲಿ ಕೆಲವು ಸಚಿವರುಗಳು ಸ್ಪರ್ಧಿಸಿದರೆ ಲಾಭವಾಗುತ್ತದೆ ಅನ್ನುವ ಅಭಿಪ್ರಾಯ ಕಾರ್ಯಕರ್ತರು ಮುಖಂಡರು ವ್ಯಕ್ತಪಡಿಸಿದ್ದಾರೆ. ಯಾರು ಸ್ಪರ್ಧಿಸಬೇಕೆನ್ನುವ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಸಂಪುಟದಲ್ಲಿರುವ ಸಚಿವರುಗಳು ಸ್ಪರ್ಧೆ ಮಾಡಬೇಕು ಬೇಡವೋ ಎನ್ನುವುದನ್ನು ಸಿಎಂ ನಿರ್ಧರಿಸುತ್ತಾರೆ. ಎರಡೂ ಬಾರಿ ನನಗೆ ಮನಸಿಲ್ಲದಿದ್ದರೂ ಪಕ್ಷದ ಸೂಚನೆ ಮೇರೆಗೆ ಸ್ಪರ್ಧಿಸಿದ್ದೇನೆ. ಪದೇ ಪದೇ ಈ ರೀತಿ ಸೂಚನೆ ಒತ್ತಡ ನೀಡುವುದು ಸರಿಯಲ್ಲ. ಈಗಾಗಲೇ ಎಐಸಿಸಿ ಪ್ರತಿನಿಧಿಗಳಿಗೂ‌ ನಾನು ನನ್ನ ಅಭಿಪ್ರಾಯ ತಿಳಿಸಿದ್ದೇನೆ ಎಂದರು.

    ವಿಧಾನಸೌಧದಲ್ಲಿ‌ ಪಾಕ್ ಪರ‌ ಘೋಷಣೆ ಹಾಗೂ ಕೆಫೆ ಬಾಂಬ್ ಪ್ರಕರಣದ ತನಿಖೆಯ ವಿಚಾರದಲ್ಲಿ ಮಾತನಾಡಿದ ಅವರು, ಬಿಜೆಪಿ ಎಲ್ಲಾ ವಿಚಾರವನ್ನು ರಾಜಕೀಯಗೊಳಿಸುತ್ತಿದೆ. ಬಿಜೆಪಿಯವರು ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ವಾಸ್ತವಂಶ, ತನಿಖೆಯ ಆಧಾರದಲ್ಲಿ ಸರಕಾರ ಎಲ್ಲಾ ಕ್ರಮ ಕೈಗೊಳ್ಳುತ್ತದೆ. ಕಾನೂನು ವ್ಯವಸ್ಥೆ ಕಾಪಾಡಲು ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ. ಈ ಘಟನೆಗಳು ಬಿಜೆಪಿಗೆ ಚುನಾವಣಾ ವಿಷಯವಾಗಬಹುದು. ಆದರೆ ನಮಗೆ ದೇಶದಲ್ಲಿ ಬೆಲೆ ಏರಿಕೆ , ನಿರುದ್ಯೋಗವೇ ಮುಂದಿನ ಚುನಾವಣೆಯ ವಿಚಾರ ಎಂದು ಕೃಷ್ಣ ಬೈರೇಗೌಡ ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply