Connect with us

    LATEST NEWS

    ಮಂಗಳೂರು – ಕೆಎಸ್ಆರ್ ಪಿ ಸಿಬ್ಬಂದಿ ಆತ್ಮಹತ್ಯೆ

    ಮಂಗಳೂರು ಫೆಬ್ರವರಿ 19: ಕೆಎಸ್ಆರ್ ಪಿಯ 7 ನೇ ಬೆಟಾಲಿಯನ್ ನ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಸೈಟ್‌ನಲ್ಲಿ ಇಂದು ಸಂಜೆ ಬೆಳಕಿಗೆ ಬಂದಿದೆ.


    ಆತ್ಮಹತ್ಯೆ ಮಾಡಿಕೊಂಡವರನ್ನು ಬೆಳಗಾಂ ನಿವಾಸಿ ವಿಮಲನಾಥ ಜೈನ್ (28) ಎಂದು ಗುರುತಿಸಲಾಗಿದ್ದು, ಇವರು ಕೆಎಸ್ಆರ್ ಪಿಯ 7 ನೇ ಬೆಟಾಲಿಯನ್ ಕೆಲಸ ನಿರ್ವಹಿಸುತ್ತಿದ್ದರು. ತಿಂಗಳ ಹಿಂದಷ್ಟೇ ತಾಯಿ ತೀರಿಕೊಂಡ ನಂತರ ದು:ಖದಲ್ಲಿದ್ದ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ನೂತನ ಬ್ಯಾಚ್‌ನವರಾಗಿದ್ದ ವಿಮಲನಾಥ್ ಇಂದು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ರೂಮಿನಲ್ಲಿ ಕೃತ್ಯ ಎಸಗಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply