Connect with us

    KARNATAKA

    ಬೇಲೂರು ಸಾರಿಗೆ ಬಸ್ ಅಲ್ಟೋ ಕಾರು ನಡುವೆ ಭೀಕರ ರಸ್ತೆ ಅಪಘಾತ – ನಾಲ್ವರು ವಿಧ್ಯಾರ್ಥಿಗಳ ಸಾವು

    ಹಾಸನ ಮಾರ್ಚ್ 22: ಕೆಎಸ್ಆರ್ ಟಿಸಿ ಬಸ್ ಹಾಗೂ ಆಲ್ಟೋ ಕಾರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ವಿಧ್ಯಾರ್ಥಿಗಳು ಸಾವನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ಬಳಿ ನಡೆದಿದೆ.


    ಮೃತರು ಬೇಲೂರಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ಪರೀಕ್ಷೆ ಮುಗಿದ ನಂತರ ಗೆಳೆಯನೊಬ್ಬನ ಆಲ್ಟೋ ಕಾರಿನಲ್ಲಿ ಐವರು ವಿದ್ಯಾರ್ಥಿಗಳು ಹೊರಟಿದ್ದರು. ವಿದ್ಯಾರ್ಥಿಗಳು ಬೇಲೂರಿನಿಂದ ಹಾಸನದ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಹಾಸನದಿಂದ ಚಿಕ್ಕಮಗಳೂರಿಗೆ ಬಸ್ ಬರುತ್ತಿತ್ತು. ಈ ವೇಳೆ ಬಸ್, ಕಾರಿಗೆ ಡಿಕ್ಕಿಯಾಗಿದೆ. ಆಗ ಕಾರಿನಲ್ಲಿದ್ದ ನಾಲ್ವರ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply