Connect with us

DAKSHINA KANNADA

ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟ ವ್ಯಕ್ತಿ ಸಾವು…!!

ವಿಟ್ಲ ಸೆಪ್ಟೆಂಬರ್ 18: ಮೂರು ದಿನಗಳ ಹಿಂದೆ ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಯಾಣಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ.


ಇವರು ಸೆಪ್ಟೆಂಬರ್ 15ರಂದು ವಿಟ್ಲ ಪೇಟೆಯಿಂದ ಆಗತ್ಯ ಕೆಲಸ ಮುಗಿಸಿ ವಿಟ್ಲ ಪಕಳಕುಂಜ ಕೆ.ಎಸ್.ಆರ್.ಟಿ.ಸಿ ಬಸ್ಸಲ್ಲಿ ವಿಟ್ಲದಿಂದ ಹೊರಟು ಕೆದುವಾರು ಎಂಬಲ್ಲಿಗೆ ಪ್ರಯಾಣಿಸುತ್ತಿದ್ದರು. ಬಸ್ ಸ್ಟಾಪ್‌ನಲ್ಲಿ ಇಳಿಯಲು ಎದ್ದು ನಿಂತಾಗ ಚಾಲಕ ತಿರುವು ರಸ್ತೆಯಲ್ಲಿ ಒಮ್ಮೆಲೇ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿದ್ದರಿಂದ ಬಸ್ಸಿನ ಹಿಂಬದಿಯ ಬಾಗಿಲಿನಿಂದ ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ಇನಾಸ್ ಅವರ ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯವಾಗಿತ್ತು.

ಹೀಗಾಗಿ ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನಿನ್ನೆ ಸಾವನ್ನಪ್ಪಿದ್ದಾರೆ..

Share Information
Continue Reading
Advertisement
Click to comment

Leave a Reply

Your email address will not be published. Required fields are marked *