Connect with us

DAKSHINA KANNADA

ಕಡಬ – ಕೆಎಸ್ಆರ್ ಟಿಸಿ ಬಸ್ ನಿಂದ ಕೆಳಗೆ ಬಿದ್ದು ಸಾವನಪ್ಪಿದ ವೃದ್ದ

ಕಡಬ ಸೆಪ್ಟೆಂಬರ್ 25: ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಂದ ಕೆಳಗೆ ಬಿದ್ದ ಪರಿಣಾಮ ವೃದ್ದರೊಬ್ಬರು ಸಾವನಪ್ಪಿದ ಘಟನೆ ರವಿವಾರ ಸಂಜೆ ಕಡಬದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಎಂದು ಗುರುತಿಸಲಾಗಿದೆ.


ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಂಚೆ ಕಚೇರಿಯ ಸಮೀಪದ ತಿರುವಿನಲ್ಲಿ ಅಚ್ಚುತ್ತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಅಚ್ಚುತ್ತ ಗೌಡರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಚಂದ್ರಶೇಖರ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *