DAKSHINA KANNADA
ಈಶ್ವರಮಂಗಲ ಸಾಂತ್ಯದಲ್ಲಿ ಪಲ್ಟಿಯಾದ ಕೆಎಸ್ಆರ್ ಟಿಸಿ ಬಸ್
ಅಪಾಯದಿಂದ ಪಾರಾದ ಪ್ರಯಾಣಿಕರು
ಪುತ್ತೂರು ಜೂನ್ 10: ಈಶ್ವರಮಂಗಲ ಸಮೀಪದ ಸಾಂತ್ಯ ಎಂಬಲ್ಲಿ ಪುತ್ತೂರಿನಿಂದ ಈಶ್ವರಮಂಗಲ ಕಡೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾಗಿ ಮನೆಯೊಂದರ ಅಂಗಳಕ್ಕೆ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಪುತ್ತೂರಿನಿಂದ ಈಶ್ವರಮಂಗಲ ಕಡೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಧರೆಗುರುಳಿ 25 ಅಡಿ ಆಳದ ಮನೆಯೊಂದರ ಅಂಗಳಕ್ಕೆ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 21 ಜನ ಪ್ರಯಾಣಿಕರಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಬಸ್ಸಿನ ಚಾಲಕ ಹಾಗೂ ನಿರ್ವಾಹಕನಿಗೆ ಸಣ್ಣ ಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.
You must be logged in to post a comment Login