DAKSHINA KANNADA
ಕೆಎಸ್ಆರ್ ಟಿಸಿ ಬಸ್ ನಿರ್ವಾಹಕಿಗೆ ಹಲ್ಲೆ ನಡೆಸಿದ್ದ ಆರೋಪಿ ಅರೆಸ್ಟ್
ಪುತ್ತೂರು ಫೆಬ್ರವರಿ 22: ಮಂಗಳೂರು- ಪುತ್ತೂರು ಕೆಎಸ್ಆರ್ಟಿಸಿ ಬಸ್ನಲ್ಲಿ ಕರ್ತವ್ಯ ನಿರತ ನಿರ್ವಾಹಕಿ ಮೇಲೆ ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ನಿರ್ವಾಹಕಿ ವಿಜಯಾ ಅವರು ನೀಡಿದ ದೂರಿನ ಮೇರೆಗೆ ಪ್ರಯಾಣಿಕ ಹಸನ್ನನ್ನು ಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ.
ಫೆಬ್ರವರಿ 20ರಂದು ಸಂಜೆ ಪುತ್ತೂರು ನಿಲ್ದಾಣದಿಂದ ಬಸ್ ಹೊರಟು ನಗರದ ಮಾರುಕಟ್ಟೆ ಬಳಿಯ ತಂಗುದಾಣ ತಲುಪಿದಾಗ ಅಂಗವಿಕಲ ಪ್ರಯಾಣಿಕರೋರ್ವರಿಗೆ ಸೀಟು ಬಿಟ್ಟುಕೊಡುವಂತೆ ನಿರ್ವಾಹಕಿ ಕೇಳಿದ್ದು, ಆಕ್ಷೇಪಿಸಿದ ಆರೋಪಿಯು ಅವ್ಯಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಬಸ್ನಿಂದ ಇಳಿದು ಓಡಿ ಪರಾರಿಯಾಗಿದ್ದ.
ನಿರ್ವಾಹಕಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಕಾರ್ಯಾಚರಣೆ ನಡೆಸಿದ ಪುತ್ತೂರು ಮಹಿಳಾ ಠಾಣಾ ಪೊಲೀಸರು ಆರೋಪಿ ಹಸನ್ನನ್ನು ಬಂಧಿಸಿದ್ದಾರೆ.
You must be logged in to post a comment Login