LATEST NEWS
ಪಡೀಲ್ ಅಂಡರ್ ಪಾಸ್ ನೀರಿನಲ್ಲಿ ಸಿಕ್ಕಿಹಾಕಿಕೊಂಡ ಕೆಎಸ್ಆರ್ ಟಿಸಿ ಬಸ್
ಮಂಗಳೂರು ಜುಲೈ 30: ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಭಾರೀ ಅವಾಂತರವನ್ನೇ ಸೃಷ್ಠಿಸಿದೆ. ಈ ನಡುವೆ ಅಂಡರ್ ಪಾಸ್ ನಲ್ಲಿ ತುಂಬಿದ್ದ ನೀರಿನಲ್ಲಿ ಕೆಎಸ್ಆರ್ ಟಿಸಿ ಬಸ್ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.
ಮಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೇ ಎಡೆಬಿಡದೆ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ. ಈ ನಡುವೆ ಮಂಗಳೂರಿನ ಪಡೀಲ್ ರೈಲ್ವೇ ಅಂಡರ್ ಪಾಸ್ ನಲ್ಲಿ ನೀರು ನಿಂತಿದ್ದು ಈ ನೀರಿನಲ್ಲಿ ಕೆಎಸ್ಆರ್ ಟಿಸಿ ಬಸ್ ಒಂದು ಸಿಕ್ಕಿಹಾಕಿಕೊಂಡಿದೆ.
ನೀರು ನಿಂತಿದ್ದರೂ ಬಸ್ ಚಾಲಕ ನೀರಿನಲ್ಲೇ ಬಸ್ ನ್ನು ಓಡಿಸಿದ್ದಾನೆ. ಈ ವೇಳೆ ಬಸ್ಸಿನೊಳಗೆ ನೀರು ನುಗ್ಗಿ ತಾಂತ್ರಿಕ ದೋಷದಿಂದ ನೀರು ಮಧ್ಯೆದಲ್ಲೇ ಬಸ್ ಬಾಕಿಯಾಗಿದೆ. ಬಸ್ ನೊಳಗಿದ್ದ ಪ್ರಯಾಣಿಕರು ಇಳಿಯಾಗದೆ ಬಸ್ ನಲ್ಲೇ ಪರದಾಟ ಪರಿಸ್ಥಿತಿ ಉಂಟಾಗಿತ್ತು. ಮಂಗಳೂರು ನಗರದಿಂದ ಪಡೀಲ್,ಬಜಾಲ್,ಜಲ್ಲಿಗುಡ್ಡೆ ಪ್ರದೇಶಕ್ಕೆ ತೆರಳುವ ಬಸ್ ಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತದೆ.
You must be logged in to post a comment Login