KARNATAKA
ಚಲಿಸುತ್ತಿದ್ದ ಬಸ್ ನಲ್ಲೆ ಹೃದಯಾಘಾತ – ಕೆಎಸ್ಆರ್ ಟಿಸಿ ಕಂಡಕ್ಟರ ವಿಧಿವಶ
ಚಿಕ್ಕಮಗಳೂರು : ಬಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭ ಹೃದಯಾಘಾತಕ್ಕೆ ಒಳಗಾಗಿ ಕೆಎಸ್ಆರ್ ಟಿಸಿ ಬಸ್ ನಿರ್ವಾಹಕ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಸಖರಾಯಪಟ್ಟಣ ಬಳಿ ಕುನ್ನಾಳು ಗ್ರಾಮದ ವಿಜಯ ಕುಮಾರ್ (42) ಎಂದು ಗುರುತಿಸಲಾಗಿದೆ. ಇವರು ಕೆಲಸ ನಿರ್ವಹಿಸುತ್ತಿದ್ದ ಬಸ್ ಚಿಕ್ಕಮಗಳೂರು ನಗರ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ಉಡುಪಿಗೆ ಹೊರಟಿತ್ತು. ಕೊಟ್ಟಿಗೆಹಾರ ಬಳಿ ಸಾಗುವಾಗ ನಿರ್ವಾಹಕ ವಿಜಯ ಕುಮಾರ್ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಚಾಲಕ ಮತ್ತು ಕೊಟ್ಟಿಗೆಹಾರ ನಿಲ್ದಾಣ ನಿರೀಕ್ಷಕ ಬಣಕಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಮೂಡಿಗೆರೆ ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇ ಅಲ್ಲಿ ಅವರು ಮೃತಪಟ್ಟಿದ್ದಾರೆ
You must be logged in to post a comment Login