DAKSHINA KANNADA
ಕೆಎಸ್ ಆರ್ ಟಿಸಿ ಬಸ್ ನಲ್ಲಿ ಚಾಲಕನ ಮೃತದೇಹ ಪತ್ತೆ
ಕೆಎಸ್ ಆರ್ ಟಿಸಿ ಬಸ್ ನಲ್ಲಿ ಚಾಲಕನ ಮೃತದೇಹ ಪತ್ತೆ
ಪುತ್ತೂರು ಮಾರ್ಚ್ 11:ರಾತ್ರಿ ಟ್ರಿಪ್ ಮುಗಿಸಿ ನಿಲ್ಲಿಸಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಚಾಲಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ.
ಮೃತಪಟ್ಟ ಚಾಲಕನನ್ನು ಬೀದರ್ ನ ರೇವಣಪ್ಪ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಟ್ರಿಪ್ ಮುಗಿಸಿ ಬಸ್ ನ್ನು ಕಡಬಪೇಟೆಯಲ್ಲಿ ನಿಲ್ಲಿಸಲಾಗಿದ್ದು, ಇಂದು ಬೆಳಿಗ್ಗೆಯ ಟ್ರಿಪ್ ಹೊರಡುವ ಬಸ್ ಇದಾಗಿದ್ದು, ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಚಾಲಕ ಹೃದಯಾಘಾತದಿಂದ ಮೃತಪಟ್ಟಿರಬೇಕೆಂಬ ಸಂಶಯ ವ್ಯಕ್ತಪಡಿಸಲಾಗಿದೆ. ಕಡಬ ಪೋಲೀಸ್ ಠಾಣೆಯಲ್ಲಿ ಪ್ರಕಕಣ ದಾಖಲಾಗಿದೆ.
You must be logged in to post a comment Login