DAKSHINA KANNADA
ಪ್ಯಾಸೆಂಜರ್ ಎದೆಗೆ ಕಾಲಿನಿಂದ ಒದ್ದ KSRTC ಬಸ್ ಕಂಡೆಕ್ಟರ್ ಅಮಾನತು…!!
ಸುಳ್ಯ ಸೆಪ್ಟೆಂಬರ್ 08: ಪ್ರಯಾಣಿಕನೊಬ್ಬನ ಎದೆಗೆ ಒದ್ದು ಬಸ್ಸಿನಿಂದ ಹೊರಹಾಕಿ ಕೆಎಸ್ಆರ್ಟಿಸಿ ಬಸ್ ಕಂಡೆಕ್ಟರ್ ನ್ನು ಇದೀಗ ನಿಗಮ ಅಮಾನತುಗೊಳಿಸಿದೆ.
ನಿನ್ನೆ ಸಂಜೆ ಕರ್ತವ್ಯ ನಿರ್ವಹಿಸಿದ್ದ ಕಂಡಕ್ಟರ್ ಸುಖರಾಜ ರೈ ಬಿಲ್ಲೆ ಪುತ್ತೂರು ತಾಲೂಕಿನ ಈಶ್ವರ ಮಂಗಲದಲ್ಲಿ ಓರ್ವ ಮದ್ಯಪಾನ ಮಾಡಿದ ಪ್ರಯಾಣಿಕರನ್ನು ವಾಹನದಿಂದ ಕೆಳಗಡೆಗೆ ಇಳಿಸುವಾಗ ಅಮಾನವೀಯವಾಗಿ ವರ್ತಿಸಿದ್ದಾರೆ. ಇದನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ವಿಡಿಯೋ ನೋಡಿದ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಯನ್ನು ಸುಬ್ಬರಾಜ್ ರೈ ಎಂದು ಗುರುತಿಸಲಾಗಿದೆ.
ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು ಆತನ ಕೊಡೆಯನ್ನು ರಸ್ತೆಗೆಸೆಯುತ್ತಾನೆ. ನಂತರ ಬಸ್ಸಿನಿಂದ ಕೆಳಗಿಳಿಯುವಂತೆ ಸೂಚಿಸಿದ ನಿರ್ವಾಹಕ ಪ್ರಯಾಣಿಕನಿಗೆ ಕೈಯಿಂದ ಹಲ್ಲೆ ನಡೆಸಿದ್ದಾನೆ. ಕೊನೆಗೆ, ಥೇಟ್ ಸಿನಿಮಾ ಶೇಲಿಯಲ್ಲೇ ಕಾಲಿನಿಂದ ಪ್ರಯಾಣಿಕನ ಎದೆಗೆ ಒದ್ದು, ರಸ್ತೆಗೆ ತಳ್ಳಿದ್ದಾನೆ.
ಬಸ್ಸಿನಲ್ಲಿರುವ ವ್ಯಕ್ತಿ ಯಾವುದೇ ಸ್ಥಿತಿಯಲ್ಲಿದ್ದರೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾವುದೇ ನಿರ್ವಾಹಕರಿಗಿಲ್ಲ. ಮೇಲ್ನೋಟಕ್ಕೆ ನಿರ್ವಾಹಕ ಮಾಡಿರುವುದು ತಪ್ಪು ಎಂದು ಕಾಣುತ್ತಿದೆ. ಹೀಗಾಗಿ, ಕೂಡಲೇ ಸೇವೆಯಿಂದ ಅಮಾನತು ಮಾಡಲಾಗುವುದು” ಎಂದು ಪುತ್ತೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
You must be logged in to post a comment Login