Connect with us

    DAKSHINA KANNADA

    ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯ ಜಾತ್ರೋತ್ಸವ ಪ್ರಾರಂಭ

    ಸುಬ್ರಹ್ಮಣ್ಯ ಡಿಸೆಂಬರ್ 12 : ಪ್ರಸಿದ್ದ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ವಾರ್ಷಿಕ ಜಾತ್ರೆ ಆರಂಭವಾಗಿದ್ದು, ಡಿಸೆಂಬರ್ 20 ರಂದು ಚಂಪಾ ಷಷ್ಠಿ ಮಹಾರಥೋತ್ಸವ ನೆರವೇರಲಿದೆ. ನಿನ್ನೆ ನಡೆದ ಸರಳ ಸಮಾರಂಭದಲ್ಲಿ ದೇವಸ್ಥಾನದ ಗರ್ಭಗುಡಿಯಿಂದ ಮೂಲ ಮೃತ್ತಿಕೆ ಸಂಗ್ರಹಿಸಿ ಭಕ್ತರಿಗೆ ವಿತರಿಸಲಾಯಿತು. ವರ್ಷದಲ್ಲಿ ಒಂದು ಬಾರಿ ಮಾತ್ರ ಪವಿತ್ರ ಮಹಾಪ್ರಸಾದ ತೆಗೆಯಲಾಗುತ್ತಿದ್ದು, ಇದನ್ನು ಪಡೆಯಲು ಬೆಳಗ್ಗಿನಿಂದಲೇ ಭಕ್ತರು ಸಾಲು ನಿಂತಿದ್ದರು. ಇನ್ನು ಜಾತ್ರೋತ್ಸವ ಮುಗಿದ ನಂತರವೇ ಭಕ್ತರಿಗೆ ಮೃತ್ತಿಕಾ ಪ್ರಸಾದ ನೀಡಲಾಗುತ್ತದೆ.


    ಇಂದು ಆರಂಭವಾಗಲಿರುವ ಜಾತ್ರೆ ಸಂದರ್ಭ ಆರಂಭದ ಸಂಕೇತವಾಗಿ ರಾಮ -ಲಕ್ಷ್ಮಣ ಎಂಬ ಎರಡು ದೊಡ್ಡ ಜೋಡಿ ಕೊಪ್ಪರಿಗೆಗಳನ್ನು ಏರಿಸಿ, ಪೂಜೆ ನೆರವೇರಿಸಲಾಗುತ್ತದೆ. ರಾತ್ರಿ ಶೇಷ ವಾಹನಯುಕ್ತ ಬಂಡಿ ಉತ್ಸವ ನಡೆಯಲಿದೆ.

    ಡಿಸೆಂಬರ್ 13ರಂದು ಶೇಷ ವಾಹನಯುಕ್ತ ಬಂಡಿ ಉತ್ಸವ, 14ರಂದು ಲಕ್ಷದೀಪೋತ್ಸವ, 15ರಂದು ಶೇಷವಾಹನೋತ್ಸವ, 16ರಂದು ಅಶ್ವವಾಹನೋತ್ಸವ, 17ರಂದು ಮಯೂರ ವಾಹನೋತ್ಸವ, 18ರಂದು ಚೌತಿ ಹೂವಿನ ತೇರಿನ ಉತ್ಸವ, 19ರಂದು ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ, 20ರಂದು ಮಹಾರಥೋತ್ಸವ, 21ರಂದು ಅವಭೃತೋತ್ಸವ ಮತ್ತು ನೌಕಾವಿಹಾರ ನೆರವೇರಲಿದೆ. 26ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ. ಈ ದಿನ ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದ್ದು, ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿದೆ.


    ಇನ್ನು ಸುಬ್ರಹ್ಮಣ್ಯ ಜಾತ್ರೋತ್ಸವ ಹಿನ್ನಲೆ ಡಿಸೆಂಬರ್ 12 ರಿಂದ ಡಿಸೆಂಬರ್ 26 ರವರೆಗೆ ಕುಕ್ಕೆಯಲ್ಲಿ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ . ಇತರ ಸೇವೆಗಳು ಎಂದಿನಂತೆ ನಡೆಯಲಿವೆ. ಚಂಪಾ ಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗ ಪ್ರತಿಷ್ಠಾಪನೆ ಸೇವೆಗಳು ನಡೆಯುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply